22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ವಲಯದ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಕನ್ಯಾಡಿ ಹರಿಹರ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕರಾದ ವಿಠಲ ಪೂಜಾರಿ ರವರು ಹಿಂದಿನ ಕಾಲದಲ್ಲಿ ಯಾವರೀತಿ ಬಡತನ ಇತ್ತು ಸಂಸ್ಕಾರ ಸಂಪ್ರದಾಯ ಆಚಾರ ವಿಚಾರಗಲಿತ್ತು ಈಗ ಅದೆಲ್ಲವೂ ಮರೆ ಮಾಚಿದೆ. ಜ್ಞಾನ ವಿಕಾಸ ಕೇಂದ್ರದಲ್ಲಿ ಜೀವನಕ್ಕೆ ಪೂರಕವಾದ ಹಲವಾರು ಮಾಹಿತಿಗಳನ್ನು ಪಡೆದು ಕುಟುಂಬಕ್ಕೆ ಬೆಳಕನ್ನು ನೀಡಲಿ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಒಕ್ಕೂಟ ಅಧ್ಯಕ್ಷ ರಾದೇಷ್ ರವರು ಒಕ್ಕೂಟದಲ್ಲಿ ಹೊಸ ಜ್ಞಾನ ವಿಕಾಸ ಕೇಂದ್ರಕ್ಕೆ ಅವಕಾಶ ದೊರೆತಿದ್ದು ಉತ್ತಮ ರೀತಿಯಲ್ಲಿ ಮುಂದುವರಿಸುವಂತೆ ತಿಳಿಸಿದರು. ಕಾರ್ಯಕ್ರಮಲ್ಲಿ ಯೋಜನಾಧಿಕಾರಿ ಯಶೋಧರ್, ಒಕ್ಕೂಟ ಪದಾಧಿಕಾರಿ ಹರಿಣಾಕ್ಷಿ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಪ್ರಮೀಳಾ ಸ್ವಾಗತಿಸಿ ಮೇಲ್ವಿಚಾರಕರಾದ ಯಶೋಧರ ಧನ್ಯವಾದವಿತ್ತರು

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya
error: Content is protected !!