July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

ಬೆಳ್ತಂಗಡಿ : ಆಡಳಿತ ಮತ್ತು ಅಭಿವೃದ್ಧಿ ವಿಷಯದಲ್ಲಿ ಉತ್ತಮ ಸಾಧನೆ ಮಾಡಿದ ಗ್ರಾಮ ಪಂಚಾಯತ್‌ಗಳಿಗೆ ಗಾಂಧಿ ಜಯಂತಿಯಂದು ನೀಡಲ್ಪಡುವ ಗಾಂಧೀ ಗ್ರಾಮ ಪುರಸ್ಕಾರದ 2023-24ನೇ ಸಾಲಿಗೆ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್ ಸೇರಿದಂತೆ ರಾಜ್ಯದ 238 ಗ್ರಾ.ಪಂ. ಗಳು ಆಯ್ಕೆಯಾಗಿದ್ದವು. ಪ್ರಶಸ್ತಿ ಘೋಷಣೆಯಾಗಿ ಎರಡು ವರ್ಷ ಕಳೆದರೂ ಪ್ರಶಸ್ತಿ ಪ್ರದಾನವಾಗಿರಲಿಲ್ಲ. ಆದರೆ ಪ್ರಶಸ್ತಿಯ ಮೊತ್ತವಾಗಿ ರೂ.5 ಲಕ್ಷ ವಿಶೇಷ ಅನುದಾನ ಪಂಚಾಯತ್ ಗಳಿಗೆ ಲಭಿಸಿತ್ತು. ಇದೀಗ ಕೊನೆಗೂ ಪ್ರಶಸ್ತಿ ಪ್ರದಾನವಾಗಿದೆ.

ಬೆಂಗಳೂರು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಡಿ.1ರಂದು ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು. ಕಾಶಿಪಟ್ಣ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಸತೀಶ್. ಕೆ ಕಾಶಿಪಟ್ಣ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಟೇಲ್ ಪ್ರಶಸ್ತಿ ಸ್ವೀಕರಿಸಿದರು.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!