32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

ಬೆಳ್ತಂಗಡಿ: ನೇತ್ರಾನಗರ ಧರ್ಮಸ್ಥಳದಲ್ಲಿ ನಿರ್ಮಾಣಗೊಂಡಿರುವ ನೂತನ ಸಂಸ್ಥೆ “ಯಾತ್ರಾ ಆತಿಥ್ಯ” ಡಿ.5 ರಂದು ಶುಭಾರಂಭಗೊಳ್ಳಲಿದೆ.

ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಿ ಸುಮಾರು 108 ರೂಮ್ಸ್ ಒಳಗೊಂಡಿರುವ ತಾಲೂಕಿನ ಬಹು ದೊಡ್ಡ ವಸತಿಗೃಹ ಕಟ್ಟಡ ಇದಾಗಿದೆ.


42೦೦೦ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಕಟ್ಟಡದಲ್ಲಿ 91 ಪ್ರೀಮಿಯಂ ರೂಮ್ಸ್, ೮ ಪ್ರೀಮಿಯಂ ಸೂಟ್ ರೂಮ್ಸ್, ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ಮಕ್ಕಳ ಆಟದ ಗ್ರೌಂಡ್, ವೆಜ್ ರೆಸ್ಟೊರೆಂಟ್, ನೀರಿನ ಕಾರಂಜಿ, ಸುಂದರವಾದ ಗಾರ್ಡನ್, ಗಿಫ್ಟ್ ಶಾಪ್, ಶಾಪಿಂಗ್ ಸೆಂಟರ್, ಹವಾನಿಯಂತ್ರಿತ ಹಾಗೂ ರಹಿತ ಸೌಲಭ್ಯಗಳಿದ್ದು ಸುಮಾರು ೫೦ ಮಂದಿಗೆ ಉದ್ಯೋಗವಕಾಶ ಸೃಷ್ಟಿಯಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಶ್ರೀಮತಿ ಅಪರ್ಣಾ ಗೌಡ ಮತ್ತು ಶಿವಕಾಂತ ಗೌಡ, ಮಮತಾ ಮತ್ತು ಶಿವರಾಮ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಶಿಷ್ ಎಸ್ ಗೌಡ, ಶೃತ ಎಸ್ ಗೌಡ, ಶ್ರೇಯಸ್ ಎಸ್ ಗೌಡ, ತೇಜಸ್ ಎಸ್ ಗೌಡ ಮತ್ತು ಎಸ್.ಪಿ ಗ್ರೂಪ್ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಲಿದ್ದಾರೆ.

Related posts

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!