September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿರುವ ಚಿನ್ನಯ್ಯಗೆ ಕೋರ್ಟ್ ಜಾಮೀನು ನೀಡಿ ವಾರ ಕಳೆದರೂ ಬಿಡುಗಡೆ ಮಾತ್ರ ಇನ್ನೂ ಸಿಕ್ಕಿಲ್ಲ.

ನವೆಂಬರ್ 26ರಂದು ಚಿನ್ನಯ್ಯಗೆ ಮಂಗಳೂರು ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿತ್ತು. ಹತ್ತು ನಿಬಂಧನೆಗಳೊಂದಿಗೆ ಇಬ್ಬರು ಜಾಮೀನುದಾರರು, 1 ಲಕ್ಷ ಭದ್ರತೆ ಬಾಂಡ್ ನೀಡಲು ಕೋರ್ಟ್ ಆದೇಶಿಸಿತ್ತು. ಆದರೆ, ಯಾರೂ ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆಯಲ್ಲಿ ಚಿನ್ನಯ್ಯ ಇನ್ನೂ ಶಿವಮೊಗ್ಗದ ಜೈಲಿನಲ್ಲಿಯೇ ಇರುವಂತಾಗಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಆರೋಪಿಸಿ ತಲೆಬುರುಡೆಯೊಂದಿಗೆ ನ್ಯಾಯಾಲಯಕ್ಕೆ ಬಂದಿದ್ದ ಚಿನ್ನಯ್ಯ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿ ತಾನು ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಕಾನೂನು ಬಾಹಿರವಾಗಿ ಹೂತು ಹಾಕಿದ್ದೇನೆ ಎಂದು ಹೇಳಿಕೆ ನೀಡಿದ್ದ ಆತನನ್ನು ಸಾಕ್ಷಿ ದೂರುದಾರ ಎಂದು ನ್ಯಾಯಾಲು ಪರಿಗಣಿಸಿತ್ತು.

ಈತನ ಹೇಳಿಕೆಯ ಆಧಾರದಲ್ಲಿ ಎಸ್.ಐ.ಟಿಯನ್ನು ರಚಿಸಲಾಗಿತ್ತು ತನಿಖೆಯ ವೇಳೆ ಚಿನ್ನಯ್ಯ ಹೇಳಿದ್ದ ಹಲವು ಸ್ಥಳಗಳಲ್ಲಿ ಅಗೆದು ಪರೀಕ್ಷಿಸಲಾಗಿತ್ತು, ಈ ನಡುವೆಯೇ ಚಿನ್ನಯ್ಯ ಹೇಳಿಕೆ ಬದಲಿಸಿ ತಾನು ಸುಳ್ಳು ಸಾಕ್ಷ್ಯ ಹೇಳಿರುವುದಾಗಿ ಎಸ್.ಐ.ಟಿ ಮುಂದೆ ಒಪ್ಪಿಕೊಂಡಿದ್ದ, ಅಲ್ಲದೆ ಆತನಿಗೆ ಬೆಂಬಲ ನೀಡಿದ್ದ ಸೌಜನ್ಯ ಪರ ಹೋರಾಟಗಾರರ ವಿರುದ್ದವೂ ಹೇಳಿಕೆ ನೀಡಿ ಇಡೀ ತನಿಖೆಯ ದಿಕ್ಕನ್ನು ಬದಲಿಸಿದ್ದ ಆತನ ಹೇಳಿಕೆಯ ಆಧಾರದ ಮೇಲೆಯೇ ಎಸ್.ಐ‌.ಟಿ ಚಿನ್ನಯ್ಯನನ್ನು ಬಂಧಿಸಿತ್ತು. ಇದಾದ ಬಳಿಕ ಚಿನ್ನಯ್ಯ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡದಿಂದ ಹಾಗೂ ಆತನ ಪರವಾಗಿ ಬಂದಿದ್ದ ವಕೀಲರಿಂದ ದೂರವಾಗಿದ್ದು ತ‌ನಗೆ ವಕೀಲರನ್ನು ನೀಡುವಂತೆ ನ್ಯಾಯಾಲಯದಲ್ಲಿ ವಿನಂತಿಸಿಕೊಂಡಿದ್ದ ಅದರಂತೆ ಆತನಿಗೆ ನ್ಯಾಯಾಲಯವೇ ವಕೀಲರನ್ನು ನೇಮಕ ಮಾಡಿತ್ತು. ಚಿನ್ನಯ್ಯನ ಪರವಾಗಿ ಇವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು, ಎಸ್.ಐ.ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಪ್ರಾಥಮಿಕ ವರದಿಯನ್ನು ನೀಡಿದ ಬೆನ್ನಲ್ಲಿಯೇ ನ್ಯಾಯಾಲಯ ಚಿನ್ನಯ್ಯ ನಿಗೆ ಜಾಮೀನು ನೀಡಿತ್ತು‌.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು – ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸುರೇಶ್ ವಿ ಅವರಿಗೆ ಸೇವಾ ನಿವೃತ್ತಿ, ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭ, ಕಾಲೇಜು ಹಾಗೂ ಹಳೆ ವಿದ್ಯಾರ್ಥಿಗಳಿಂದ ಸನ್ಮಾನ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya
error: Content is protected !!