September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

ನಡ: “ಕಾಲೇಜಿನಲ್ಲಿ ಆಯೋಜಿಸಲಾದ ಎಲ್ಲಾ ಚಟುವಟಿಕೆಗಳಲ್ಲೂ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಈಗ ಬಹುಮಾನವನ್ನು ಪಡೆಯುವ ಸಂಭ್ರಮ.”ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ
ನಿವೃತ್ತ ಪ್ರಾಂಶುಪಾಲ ಚಂದ್ರಶೇಖರ್ ನುಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮುರಳಿ ಬಲಿಪ ಪಾಲ್ಗೊಂಡು “ಎಲ್ಲಾ ಹಕ್ಕಿಗಳಿಗೂ ಆಹಾರ ಭಗವಂತ ಸೃಷ್ಟಿಸಿದ್ದಾನೆ ಆದರೆ ಅವು ಹುಡುಕಿಕೊಂಡು ಹೋಗಬೇಕು ಪ್ರಯತ್ನಬೇಕು.”ಎಂದು ಕರೆ ನೀಡಿದರು. ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ
ಶ್ರೀಮತಿ ಮಂಜುಳಾ ಅಧ್ಯಕ್ಷತೆಯನ್ನು ವಹಿಸಿದ್ದರು.


ವೇದಿಕೆಯಲ್ಲಿ ಪ್ರಭಾಕರ ಮಯ್ಯ, ಅಜಿತ್ ಆರಿಗ, ಮುನಿರಾಜ ಅಜ್ರಿ, ಮೋಹನ ಗೌಡ, ಕುಮಾರ ಭವಿತ್ ಗೌಡ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಸ್ವಾಗತಿಸಿ, ಶ್ರೀಮತಿ ಸವಿತಾ ವಂದಿಸಿದರು. ಶ್ರೀಮತಿ ಪವಿತ್ರ ಮತ್ತು ಶ್ರೀಮತಿ ಸುಕನ್ಯ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವಸಂತಿ ಪಿ. ವರದಿ ವಾಚಿಸಿದರು. ಕಳೆದ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಎಂಟು ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದರ ನಿರ್ವಹಣೆಯನ್ನು ಶಿಲ್ಪಾ ಡಿ ನಿರ್ವಹಿಸಿದರು. ಕ್ರೀಡಾ ಸಾಧಕರಿಗೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕ್ರೀಡಾ ಪ್ರೇಮಿ ಹಾಗೂ ತರಬೇತುದಾರ ಅಜಿತ್ ಇವರನ್ನು ಸನ್ಮಾನಿಸಲಾಯಿತು.

Related posts

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya
error: Content is protected !!