23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭದ ಶೋಭಾಯಾತ್ರೆಗೆ ಉಜಿರೆಯಲ್ಲಿ ಗಣ್ಯರಿಂದ ಚಾಲನೆ

ಉಜಿರೆ: ಇತಿಹಾಸ ಪ್ರಸಿದ್ಧ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಶ್ರೀಮತಿ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಉಜಿರೆಗೆ ತಲುಪಿದ್ದು ಇದರ ಶೋಭಾಯಾತ್ರೆಗೆ ಡಿ.4ರಂದು ಮಧ್ಯಾಹ್ನ 3.30 ಸಂದರ್ಭ ಉಜಿರೆಯಲ್ಲಿ ವಿವಿಧ ಗಣ್ಯರು ಸ್ವಾಗತಿಸಿ, ಚಾಲನೆ ನೀಡಿದರು.

ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ರವರು ಮಾಲಾರ್ಪಣೆ ಮಾಡಿ, ಹೀಡು ಕಾಯಿ ಒಡೆದು ಚಾಲನೆ ನೀಡಿದರು. ಪಜಿರಡ್ಕ ದೇವಸ್ಥಾನದ ಅರ್ಚಕರು ಪೂಜಾ ವಿಧಾನಗಳನ್ನು ಪೂರೈಸಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಎಂ ನಾಗೇಶ್‌ ಕುಮಾರ್ ಗೌಡ, ಉಜಿರೆ ಮಹಾವೀರ ಏಜೆನ್ಸಿ ಮಾಲಕ ಪ್ರಭಾಕರ್ ಜೈನ್, ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ, ಉಜಿರೆ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಉದ್ಯಮಿ ಮೋಹನ್ ಶೆಟ್ಟಿಗಾರ್, ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಕಲ್ಮಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ,ಸುನಿಲ್ ಕನ್ಯಾಡಿ, ಹುಕುಂ ರಾಮ್ ಪಟೇಲ್, ರವಿ ಭಟ್ ಕಲ್ಮಂಜ, ಶಶಿಧರ್ ಕಲ್ಮಂಜ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಮಿತಾ ಪೂಜಾರಿ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಸುನೀಲ್ ಕನ್ಯಾಡಿ, ತುಕಾರಾಮ್ ಸಾಲಿಯಾನ್, ರವಿ ಭಟ್ ಕಲ್ಮಂಜ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Related posts

ಪದ್ಮುಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ

Suddi Udaya

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!