September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ವಲಯದ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಕನ್ಯಾಡಿ ಹರಿಹರ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕರಾದ ವಿಠಲ ಪೂಜಾರಿ ರವರು ಹಿಂದಿನ ಕಾಲದಲ್ಲಿ ಯಾವರೀತಿ ಬಡತನ ಇತ್ತು ಸಂಸ್ಕಾರ ಸಂಪ್ರದಾಯ ಆಚಾರ ವಿಚಾರಗಲಿತ್ತು ಈಗ ಅದೆಲ್ಲವೂ ಮರೆ ಮಾಚಿದೆ. ಜ್ಞಾನ ವಿಕಾಸ ಕೇಂದ್ರದಲ್ಲಿ ಜೀವನಕ್ಕೆ ಪೂರಕವಾದ ಹಲವಾರು ಮಾಹಿತಿಗಳನ್ನು ಪಡೆದು ಕುಟುಂಬಕ್ಕೆ ಬೆಳಕನ್ನು ನೀಡಲಿ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಒಕ್ಕೂಟ ಅಧ್ಯಕ್ಷ ರಾದೇಷ್ ರವರು ಒಕ್ಕೂಟದಲ್ಲಿ ಹೊಸ ಜ್ಞಾನ ವಿಕಾಸ ಕೇಂದ್ರಕ್ಕೆ ಅವಕಾಶ ದೊರೆತಿದ್ದು ಉತ್ತಮ ರೀತಿಯಲ್ಲಿ ಮುಂದುವರಿಸುವಂತೆ ತಿಳಿಸಿದರು. ಕಾರ್ಯಕ್ರಮಲ್ಲಿ ಯೋಜನಾಧಿಕಾರಿ ಯಶೋಧರ್, ಒಕ್ಕೂಟ ಪದಾಧಿಕಾರಿ ಹರಿಣಾಕ್ಷಿ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಪ್ರಮೀಳಾ ಸ್ವಾಗತಿಸಿ ಮೇಲ್ವಿಚಾರಕರಾದ ಯಶೋಧರ ಧನ್ಯವಾದವಿತ್ತರು

Related posts

ಲಾಯಿಲ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!