September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

ಧರ್ಮಸ್ಥಳ: ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.5ರಂದು ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಶಿಲಾಮಯ ಧ್ವಜಸ್ತಂಭ ಡಿ.4 ರಂದು ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ, ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ತರಲಾಯಿತು.

ಮುಖ್ಯ ಪ್ರವೇಶದ್ವಾರದ ಬಳಿ ದೇವಸ್ಥಾನದ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ಲೆಕ್ಕಪತ್ರ ವಿಭಾಗದ ಮುಖ್ಯಸ್ಥ ಪುರಂದರ ಭಟ್, ಜಮಾ ಉಗ್ರಾಣದ ನಿವೃತ್ತ ಮುತ್ಸದ್ಧಿ ಭುಜಬಲಿ ಧರ್ಮಸ್ಥಳ, ದೇವಳ ನೌಕರರು ಹಾಗೂ ಊರಿನ ನಾಗರಿಕರು ಭವ್ಯ ಸ್ವಾಗತ ಕೋರಿದರು.


ಶಾಸಕ ಹರೀಶ್ ಪೂಂಜ ಮತ್ತು ರಕ್ಷಿತ್ ಶಿವರಾಂ ಉಪಸ್ಥಿತರಿದ್ದರು.
ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ, ದೇವಸ್ಥಾನದ ಪ್ರಧಾನ ಅರ್ಚಕರುಗಳು ವಿಶೇಷ ಪ್ರಾರ್ಥನೆ ಮಾಡಿ, ಫಲಪುಷ್ಪ ಹಾಗೂ ಹಾರವನ್ನು ಸಮರ್ಪಿಸಿದರು.
ಶ್ರೀ ಮಂಜುನಾಥ ಸ್ವಾಮಿ, ಧರ್ಮದೇವತೆಗಳು ಹಾಗೂ ಅಣ್ಣಪ್ಪಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಮಾಡಿ ಶಿಲಾಮಯ ಧ್ವಜಸ್ತಂಭದ ಪ್ರತಿಷ್ಠಾಪನಾ ಕಾರ್ಯ ಯಶಸ್ವಿಯಾಗಲಿ  ಎಂದು ಪೂಜ್ಯ ಹೆಗ್ಗಡೆಯವರ ಸಂದೇಶದೊಂದಿಗೆ ಮುಂದೆ ಪಜಿರಡ್ಕ ಕ್ಷೇತ್ರವು ಅತಿಶಯ ಕ್ಷೇತ್ರವಾಗಿ ಬೆಳೆಯಲಿ ಹಾಗೂ ಬೆಳಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಭಕ್ತರೆಲ್ಲರೂ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ನಂತರ ಶಿಲಾಮಯ ಧ್ವಜಸ್ತಂಭ ಪಜಿರಡ್ಕ ದೇವಸ್ಥಾನದ ಕಡೆಗೆ ಯಾನ ಮುಂದುವರಿಸಿತು.

Related posts

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಆ.12: ಬೆಳ್ತಂಗಡಿಯಲ್ಲಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ವಿತರಣೆ

Suddi Udaya
error: Content is protected !!