37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ. ದೋಷಾರೋಪ ಪಟ್ಟಿ(ಚಾಜ್‌ರ್ಶೀಟ್) ಅಲ್ಲ ಎಂದು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ.

ಇಂದು (ಶುಕ್ರವಾರ) ಬೆಂಗಳೂರಿನ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಅಂತಿಮ ಚಾಜ್‌ರ್ಶೀಟ್ ಸಲ್ಲಿಕೆಯಾಗಿದೆ ಅಥವಾ ಸಿದ್ಧಗೊಂಡಿದೆ ಎಂದು ಹೇಳಿದವರ್ಯಾರು? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ. ಈಗ ಸಲ್ಲಿಕೆ ಆಗಿರುವುದು ದೋಷಾರೋಪ ಪಟ್ಟಿ ಅಲ್ಲ, ತನಿಖೆಯ ವರದಿ ಅಷ್ಟೇ ಎಂದರು.

ಈ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಮಾತ್ರ ಗುರಿಯಾಗಿಸಿ ಬಂಧಿಸಲಾಯಿತು, ಇದಕ್ಕೆ ಸಂಬಂಧಿಸಿದ ಉಳಿದವರನ್ನೇಕೆ ಬಂಧಿಸಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಣಬ್ ಮೊಹಾಂತಿ, ಎಲ್ಲರನ್ನು ಬಂಧನ ಮಾಡುವುದೇ ತನಿಖೆಯಲ್ಲ. ಸದ್ಯ ಪ್ರಕರಣದ ತನಿಖೆ ಉತ್ತಮ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.

Related posts

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya
error: Content is protected !!