23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು.

ಉಜಿರೆಯ ರತ್ನಮಾನಸದ ಸಹಪಾಲಕರಾದ ರವಿಚಂದ್ರ ಬಿ ಇವರು ದೀಪ ಪ್ರಜ್ವಲನ ಮಾಡುವುದರ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಶಾಲಾ ಹಂತದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಎಲ್ಲರೂ ಸಕ್ರಿಯವಾಗಿ ತನ್ನನ್ನು ತಾನು ತೊಗಡಿಸಿಕೊಂಡು ಕ್ರೀಡಾಸ್ಪೂರ್ತಿಯನ್ನು ಮೆರೆಯಬೇಕು, ಕ್ರೀಡೆಯಲ್ಲಿ ಸೋಲು ಗೆಲುವು ಎನ್ನುವುದು ಮುಖ್ಯವಲ್ಲ ಭಾಗವಹಿಸುವಿಕೆಯ ಮುಖ್ಯ ಎಂದು ಅಭಿಪ್ರಾಯಪಟ್ಟರು.


ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಶರೀರಿಕ ಬೆಳವಣಿಗೆಗೆ ಕ್ರೀಡೆ ಅತ್ಯಂತ ಮಹತ್ವ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕ್ರೀಡಾ ಪ್ರತಿಜ್ಞೆಯನ್ನು ಶಾಲಾ ವಿದ್ಯಾರ್ಥಿಯಾದ ಶಬ್ ನಮ್ ಬೋಧಿಸಿದರು.
ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿಯಾದ ಶ್ರೀಮತಿ ಯಶೋಧ ಸ್ವಾಗತಿಸಿ, ಶಾಲಾ ಹಿರಿಯ ಶಿಕ್ಷಕಿಯಾದ ಶ್ರೀಮತಿ ತೇಜಾವತಿ ಧನ್ಯವಾದವಿತ್ತರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶೀಲಾ ನಿರೂಪಿಸಿದರು.

Related posts

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಜನಿವಾರ ತೆಗೆಸಿದ ಪ್ರಕರಣ: ತಾಲೂಕು ವಿಪ್ರ ಭಾಂದವರಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya
error: Content is protected !!