23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ.

ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ಆದೇಶ ಮಾಡಿದ್ದರು ಈ ಆದೇಶವನ್ನು ಪ್ರಶ್ನಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಗಡಿಪಾರು ಆದೇಶವನ್ನು ರದ್ದುಪಡಿಸಿ ಆದೇಶ ನೀಡಿತ್ತು ಹಾಗೂ ಅವರನ್ನು ಗಡಿಪಾರು ಮಾಡಬೇಕಾದರೆ ಮತ್ತೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

ಅದರಂತೆ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವ ಬಗ್ಗೆ ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ಮತ್ತೆ ನೋಟೀಸ್ ನೀಡಿದೆ. ಲಭ್ಯ ಮಾಹಿತಿಯಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಡಿ.8 ರಂದು ಪುತ್ತೂರು ಎಸಿ ಮುಂದೆ ಹಾಜರಾಗಲು ನೋಟಿಸ್ ಜಾರಿ ಮಾಡಿದೆ. ಈಗ ನೀಡಿರುವ ನೋಟೀಸ್ ನಲ್ಲಿ ಹೊಸದಾಗಿ ದಾಖಲಾಗಿರುವ ಪ್ರಕರಣಗಳನ್ನು ಸೇರಿಸಿ ನೋಟೀಸ್ ನೀಡಲಾಗಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿವಾದ ಮತ್ತೆ ಮುನ್ನೆಲೆಗೆ ಬಂದಂತಾಗಿದೆ.

Related posts

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya
error: Content is protected !!