ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ. ದೋಷಾರೋಪ ಪಟ್ಟಿ(ಚಾಜ್‌ರ್ಶೀಟ್) ಅಲ್ಲ ಎಂದು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ.

ಇಂದು (ಶುಕ್ರವಾರ) ಬೆಂಗಳೂರಿನ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಅಂತಿಮ ಚಾಜ್‌ರ್ಶೀಟ್ ಸಲ್ಲಿಕೆಯಾಗಿದೆ ಅಥವಾ ಸಿದ್ಧಗೊಂಡಿದೆ ಎಂದು ಹೇಳಿದವರ್ಯಾರು? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ. ಈಗ ಸಲ್ಲಿಕೆ ಆಗಿರುವುದು ದೋಷಾರೋಪ ಪಟ್ಟಿ ಅಲ್ಲ, ತನಿಖೆಯ ವರದಿ ಅಷ್ಟೇ ಎಂದರು.

ಈ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಮಾತ್ರ ಗುರಿಯಾಗಿಸಿ ಬಂಧಿಸಲಾಯಿತು, ಇದಕ್ಕೆ ಸಂಬಂಧಿಸಿದ ಉಳಿದವರನ್ನೇಕೆ ಬಂಧಿಸಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಣಬ್ ಮೊಹಾಂತಿ, ಎಲ್ಲರನ್ನು ಬಂಧನ ಮಾಡುವುದೇ ತನಿಖೆಯಲ್ಲ. ಸದ್ಯ ಪ್ರಕರಣದ ತನಿಖೆ ಉತ್ತಮ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.

Related posts

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya
error: Content is protected !!