22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಡಿ.5ರಂದು ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ ಭಾಗವಹಿಸಿ ಮಾತನಾಡಿದರು. ಚಿತ್ರಕಲಾ ಸ್ಪರ್ಧಾ ತೀರ್ಪುಗಾರರಾಗಿ ಗಣೇಶ್ ಆಚಾರ್ಯ ಗುಂಪಲಾಜೆ ಉಪಸ್ಥಿತರಿದ್ದರು.

ತಾಲೂಕಿನ 20 ಸರಕಾರಿ ಶಾಲೆಗಳಲ್ಲಿ 1500 ಮಕ್ಕಳಿಗೆ ಸ್ಪರ್ಧೆಯನ್ನು ಏರ್ಪಡಿಸಿದ್ದು, ಅದರಲ್ಲಿ ಆಯ್ದ 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅಂತಿಮ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ನಂತರ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಅನ್ವಿತಾ 5ನೇ ತರಗತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ಪ್ರಥಮ, ತನ್ವಿ ಪಿವಿ 5ನೇ ತರಗತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ದ್ವಿತೀಯ, ಆಯಿಶತ್ ಹಿಶನ 5ನೇ ತರಗತಿ ಗುರುವಾಯನಕೆರೆ ಶಾಲೆ ತೃತೀಯ ಸ್ಥಾನವನ್ನು ಪಡೆದುಕೊಂಡರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸಾನಾ ಪತ್ರ ಹಾಗೂ ವಿಶೇಷ ಬಹುಮಾನಗಳನ್ನು ವಿತರಿಸಲಾಯಿತು.

ಬೆಳ್ತಂಗಡಿ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಮಾತನಾಡಿದರು. ಸಹಾಯಕ ನಿರ್ವಾಹಕ ಕೃಪೇಶ್ ಸ್ವಾಗತಿಸಿ ನಿರೂಪಿಸಿದರು.

ಈ ಸಂದರ್ಭದಲ್ಲಿ ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು, ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಪೋಷಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!