September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

ಉಜಿರೆ : ಉಜಿರೆಯ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಹಯೋಗದಲ್ಲಿ ಉಜಿರೆಯ ಐಟಿ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಂತರ್ ಕಾಲೇಜು ಮಂಗಳೂರು ವಿಭಾಗಮಟ್ಟ ಹಾಗು ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.

ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟವನ್ನು ಉಜಿರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಉಷಾ ಕಾರಂತ್ ಉದ್ಘಾಟಿಸಿ, ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದಾರೆ. ನಾವು ಪರಿಶ್ರಮ ಮತ್ತು ಪರಿಣಿತಿಯಿಂದ ಮುಂದೆ ಸಾಗಬೇಕು. ದೃಢತೆ ಮತ್ತು ಛಲವೊಂದಿದ್ದರೆ ಎಲ್ಲವು ಸಾಧ್ಯ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಹಿಳಾ ಪ್ರತಿಭೆಗಳು ಮತ್ತಷ್ಟು ಹೆಚ್ಚಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ ಮಾತನಾಡಿ, ಸಂಸ್ಥೆಯ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡೆಗೆ ವಿಶೇಷ ಆದ್ಯತೆ ಇದೆ. ಈ ಕಾರಣದಿಂದಾಗಿಯೇ ಇಂದು ಎಸ್.ಡಿ.ಎಂ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಕ್ರೀಡಾಳುಗಳು ಸ್ಪರ್ಧೇಗಳನ್ನು ಎದುರಿಸಿದಂತೆ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಬೇಕು. ಆಗ ನಮ್ಮ ಆತ್ಮ ವಿಶ್ವಾಸ ದೃಢವಾಗುತ್ತದೆ ಎಂದರು.

ಕಾರ್ಯಕ್ರಮದ ಉದ್ಘಾಟನಾ ವೇದಿಕೆಯಲ್ಲಿ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗು ತೀರ್ಪು ಗಾರರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ನಿವೇದಿತಾ ನಿರೂಪಿಸಿ, ವಿದ್ಯಾರ್ಥಿನಿ ಅಪೇಕ್ಷಾ ಸರ್ವರನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ಅರ್ಚನ ವಂದಿಸಿದರು. 3 ದಿನಗಳ ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟವನ್ನು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಪ್ರಭಾಕರ್ ಸಂಯೋಜಿಸಿದರು.

ಪ್ರಶಸ್ತಿಗಳ ವಿವರ :

ಅಂತಿಮ ದಿನದ ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕ ಬಳ್ಳಾಪುರ , ಮಂಗಳೂರು ಸೇರಿದಂತೆ 15 ವಿವಿಧ ಜಿಲ್ಲೆಗಳ ಕಾಲೇಜಿನ ಮಹಿಳೆಯರ ತಂಡವು ಭಾಗವಹಿಸಿದ್ದವು. ರಾಜ್ಯ ಮಟ್ಟದ ಫೈನಲ್ ಪಂದ್ಯಟಾಕ್ಕೆ ಎರಡೂ ದಕ್ಷಿಣ ಕನ್ನಡದ ಮಂಗಳೂರು ತಂಡಗಳೇ ಪ್ರವೇಶ ಪಡೆದವು.

ಅಂತಿಮ ಪಂದ್ಯದಲ್ಲಿ ಮಂಗಳೂರಿನ ಸೈಂಟ್ ಜೋಸೆಫ್ ಕಾಲೇಜಿನ ಮಹಿಳಾ ತಂಡವು ಪ್ರಥಮ ಸ್ಥಾನ ಪಡೆದು, ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ಮಹಿಳಾ ತಂಡದವು ದ್ವೀತಿಯ ಸ್ಥಾನ ಪಡೆಯಿತು. ತೃತೀಯ ಸ್ಥಾನವನ್ನು ಚಿಕ್ಕಬಳ್ಳಾಪುರದ ಎಸ್.ಜೆ.ಸಿ.ಐಟಿ ಕಾಲೇಜಿನ ಮಹಿಳಾ ತಂಡವು ತೃತೀಯ ಸ್ಥಾನವನ್ನು ಪಡೆಯಿತು. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಹಿಳಾ ತಂಡ‌ ಚತುರ್ಥ ಸ್ಥಾನ ಪಡೆಯಿತು.

ವೈಯಕ್ತಿಕ ಪ್ರಶಸ್ತಿಗಳ ಭಾಗವಾಗಿ ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಸೈಂಟ್ ಜೋಸೆಫ್ ಕಾಲೇಜಿನ ನಿಶಾ ಆಲ್ ರೌಂಡರ್, ಭೂಮಿಕಾ ಉತ್ತಮ ರಿಸೀವರ್ ಹಾಗು ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿ ಕುಶಿ ಉತ್ತಮ ಎಸೆತಗಾರ್ತಿ ಪ್ರಶಸ್ತಿಯನ್ನು ಪಡೆದರು. ಅಂತರ್ ಕಾಲೇಜು ಮಂಗಳೂರು ವಿಭಾಗಮಟ್ಟದ ಪಂದ್ಯದಲ್ಲಿ ಉತ್ತಮ ಆಲ್ ರೌಂಡರ್ ಸೈಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿನಿ ಡಿಯೋನಾ, ಉತ್ತಮ ರಿಸೀವರ್ ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ದಿಯಾ ಹಾಗು ಉತ್ತಮ ಎಸೆತ ಪ್ರಶಸ್ತಿಯನ್ನು ಉಜಿರೆಯ ಎಸ್.ಡಿ.ಎಂ ಐಟಿ ಕಾಲೇಜಿನ ರಕ್ಷಿತಾ ಪಡೆದು ಕೊಂಡರು.

ಮೊದಲನೆಯ ದಿನದ ಆರಂಭ ಪಂದ್ಯದಲ್ಲಿ ಮಂಗಳೂರು, ಸುಳ್ಯ, ಮೂಡುಬಿದಿರೆ, ಕುಂದಾಪುರ ಸೇರಿದಂತೆ 12 ವಿವಿಧ ಕಾಲೇಜಿನ ತಂಡಗಳು ಸೆಣಸಾಡಿದವು. ಅಂತರ್ ಕಾಲೇಜು ಮಂಗಳೂರು ವಿಭಾಗಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಮಂಗಳೂರಿನ ಸೈಂಟ್ ಜೋಸೆಫ್ ಕಾಲೇಜಿನ ಮಹಿಳಾ ತಂಡವು ಪ್ರಥಮ ಸ್ಥಾನ ಪಡೆದು, ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ಮಹಿಳಾ ತಂಡದವು ದ್ವೀತಿಯ ಸ್ಥಾನ ಪಡೆಯಿತು. ಅತೀಥೆಯ ಉಜಿರೆಯ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಹಿಳಾ ತಂಡವು ತೃತೀಯ ಸ್ಥಾನಕ್ಕೆ ಭಾಜನರಾದರು.

ವಿಜೇತ ತಂಡಗಳಿಗೆ ಉಜಿರೆಯ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು.
ಉಪನ್ಯಾಸಕರಾದ ಡಾ.ರವೀಶ್ ಪ್ರಶಸ್ತಿ ವಾಚಿಸಿದರು. ಉಪನ್ಯಾಸಕ ಡಾ. ನವೀನ್ ಸಹಕರಿಸಿದರು.

Related posts

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆ ಮತ್ತು ಸಾಧನ ಸಲಕರಣೆ ವಿತರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!