July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

ಧರ್ಮಸ್ಥಳ: ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.5ರಂದು ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಶಿಲಾಮಯ ಧ್ವಜಸ್ತಂಭ ಡಿ.4 ರಂದು ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ, ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ತರಲಾಯಿತು.

ಮುಖ್ಯ ಪ್ರವೇಶದ್ವಾರದ ಬಳಿ ದೇವಸ್ಥಾನದ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ಲೆಕ್ಕಪತ್ರ ವಿಭಾಗದ ಮುಖ್ಯಸ್ಥ ಪುರಂದರ ಭಟ್, ಜಮಾ ಉಗ್ರಾಣದ ನಿವೃತ್ತ ಮುತ್ಸದ್ಧಿ ಭುಜಬಲಿ ಧರ್ಮಸ್ಥಳ, ದೇವಳ ನೌಕರರು ಹಾಗೂ ಊರಿನ ನಾಗರಿಕರು ಭವ್ಯ ಸ್ವಾಗತ ಕೋರಿದರು.


ಶಾಸಕ ಹರೀಶ್ ಪೂಂಜ ಮತ್ತು ರಕ್ಷಿತ್ ಶಿವರಾಂ ಉಪಸ್ಥಿತರಿದ್ದರು.
ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ, ದೇವಸ್ಥಾನದ ಪ್ರಧಾನ ಅರ್ಚಕರುಗಳು ವಿಶೇಷ ಪ್ರಾರ್ಥನೆ ಮಾಡಿ, ಫಲಪುಷ್ಪ ಹಾಗೂ ಹಾರವನ್ನು ಸಮರ್ಪಿಸಿದರು.
ಶ್ರೀ ಮಂಜುನಾಥ ಸ್ವಾಮಿ, ಧರ್ಮದೇವತೆಗಳು ಹಾಗೂ ಅಣ್ಣಪ್ಪಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಮಾಡಿ ಶಿಲಾಮಯ ಧ್ವಜಸ್ತಂಭದ ಪ್ರತಿಷ್ಠಾಪನಾ ಕಾರ್ಯ ಯಶಸ್ವಿಯಾಗಲಿ  ಎಂದು ಪೂಜ್ಯ ಹೆಗ್ಗಡೆಯವರ ಸಂದೇಶದೊಂದಿಗೆ ಮುಂದೆ ಪಜಿರಡ್ಕ ಕ್ಷೇತ್ರವು ಅತಿಶಯ ಕ್ಷೇತ್ರವಾಗಿ ಬೆಳೆಯಲಿ ಹಾಗೂ ಬೆಳಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಭಕ್ತರೆಲ್ಲರೂ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ನಂತರ ಶಿಲಾಮಯ ಧ್ವಜಸ್ತಂಭ ಪಜಿರಡ್ಕ ದೇವಸ್ಥಾನದ ಕಡೆಗೆ ಯಾನ ಮುಂದುವರಿಸಿತು.

Related posts

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya
error: Content is protected !!