23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

ಧರ್ಮಸ್ಥಳ: ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.5ರಂದು ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಶಿಲಾಮಯ ಧ್ವಜಸ್ತಂಭ ಡಿ.4 ರಂದು ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ, ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ತರಲಾಯಿತು.

ಮುಖ್ಯ ಪ್ರವೇಶದ್ವಾರದ ಬಳಿ ದೇವಸ್ಥಾನದ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ಲೆಕ್ಕಪತ್ರ ವಿಭಾಗದ ಮುಖ್ಯಸ್ಥ ಪುರಂದರ ಭಟ್, ಜಮಾ ಉಗ್ರಾಣದ ನಿವೃತ್ತ ಮುತ್ಸದ್ಧಿ ಭುಜಬಲಿ ಧರ್ಮಸ್ಥಳ, ದೇವಳ ನೌಕರರು ಹಾಗೂ ಊರಿನ ನಾಗರಿಕರು ಭವ್ಯ ಸ್ವಾಗತ ಕೋರಿದರು.


ಶಾಸಕ ಹರೀಶ್ ಪೂಂಜ ಮತ್ತು ರಕ್ಷಿತ್ ಶಿವರಾಂ ಉಪಸ್ಥಿತರಿದ್ದರು.
ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ, ದೇವಸ್ಥಾನದ ಪ್ರಧಾನ ಅರ್ಚಕರುಗಳು ವಿಶೇಷ ಪ್ರಾರ್ಥನೆ ಮಾಡಿ, ಫಲಪುಷ್ಪ ಹಾಗೂ ಹಾರವನ್ನು ಸಮರ್ಪಿಸಿದರು.
ಶ್ರೀ ಮಂಜುನಾಥ ಸ್ವಾಮಿ, ಧರ್ಮದೇವತೆಗಳು ಹಾಗೂ ಅಣ್ಣಪ್ಪಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಮಾಡಿ ಶಿಲಾಮಯ ಧ್ವಜಸ್ತಂಭದ ಪ್ರತಿಷ್ಠಾಪನಾ ಕಾರ್ಯ ಯಶಸ್ವಿಯಾಗಲಿ  ಎಂದು ಪೂಜ್ಯ ಹೆಗ್ಗಡೆಯವರ ಸಂದೇಶದೊಂದಿಗೆ ಮುಂದೆ ಪಜಿರಡ್ಕ ಕ್ಷೇತ್ರವು ಅತಿಶಯ ಕ್ಷೇತ್ರವಾಗಿ ಬೆಳೆಯಲಿ ಹಾಗೂ ಬೆಳಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಭಕ್ತರೆಲ್ಲರೂ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ನಂತರ ಶಿಲಾಮಯ ಧ್ವಜಸ್ತಂಭ ಪಜಿರಡ್ಕ ದೇವಸ್ಥಾನದ ಕಡೆಗೆ ಯಾನ ಮುಂದುವರಿಸಿತು.

Related posts

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!