22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಡಿ.5ರಂದು ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ ಭಾಗವಹಿಸಿ ಮಾತನಾಡಿದರು. ಚಿತ್ರಕಲಾ ಸ್ಪರ್ಧಾ ತೀರ್ಪುಗಾರರಾಗಿ ಗಣೇಶ್ ಆಚಾರ್ಯ ಗುಂಪಲಾಜೆ ಉಪಸ್ಥಿತರಿದ್ದರು.

ತಾಲೂಕಿನ 20 ಸರಕಾರಿ ಶಾಲೆಗಳಲ್ಲಿ 1500 ಮಕ್ಕಳಿಗೆ ಸ್ಪರ್ಧೆಯನ್ನು ಏರ್ಪಡಿಸಿದ್ದು, ಅದರಲ್ಲಿ ಆಯ್ದ 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅಂತಿಮ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ನಂತರ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಅನ್ವಿತಾ 5ನೇ ತರಗತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ಪ್ರಥಮ, ತನ್ವಿ ಪಿವಿ 5ನೇ ತರಗತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ದ್ವಿತೀಯ, ಆಯಿಶತ್ ಹಿಶನ 5ನೇ ತರಗತಿ ಗುರುವಾಯನಕೆರೆ ಶಾಲೆ ತೃತೀಯ ಸ್ಥಾನವನ್ನು ಪಡೆದುಕೊಂಡರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸಾನಾ ಪತ್ರ ಹಾಗೂ ವಿಶೇಷ ಬಹುಮಾನಗಳನ್ನು ವಿತರಿಸಲಾಯಿತು.

ಬೆಳ್ತಂಗಡಿ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಮಾತನಾಡಿದರು. ಸಹಾಯಕ ನಿರ್ವಾಹಕ ಕೃಪೇಶ್ ಸ್ವಾಗತಿಸಿ ನಿರೂಪಿಸಿದರು.

ಈ ಸಂದರ್ಭದಲ್ಲಿ ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು, ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಪೋಷಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya
error: Content is protected !!