September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಡಿ.5ರಂದು ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ ಭಾಗವಹಿಸಿ ಮಾತನಾಡಿದರು. ಚಿತ್ರಕಲಾ ಸ್ಪರ್ಧಾ ತೀರ್ಪುಗಾರರಾಗಿ ಗಣೇಶ್ ಆಚಾರ್ಯ ಗುಂಪಲಾಜೆ ಉಪಸ್ಥಿತರಿದ್ದರು.

ತಾಲೂಕಿನ 20 ಸರಕಾರಿ ಶಾಲೆಗಳಲ್ಲಿ 1500 ಮಕ್ಕಳಿಗೆ ಸ್ಪರ್ಧೆಯನ್ನು ಏರ್ಪಡಿಸಿದ್ದು, ಅದರಲ್ಲಿ ಆಯ್ದ 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅಂತಿಮ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ನಂತರ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಅನ್ವಿತಾ 5ನೇ ತರಗತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ಪ್ರಥಮ, ತನ್ವಿ ಪಿವಿ 5ನೇ ತರಗತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ದ್ವಿತೀಯ, ಆಯಿಶತ್ ಹಿಶನ 5ನೇ ತರಗತಿ ಗುರುವಾಯನಕೆರೆ ಶಾಲೆ ತೃತೀಯ ಸ್ಥಾನವನ್ನು ಪಡೆದುಕೊಂಡರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸಾನಾ ಪತ್ರ ಹಾಗೂ ವಿಶೇಷ ಬಹುಮಾನಗಳನ್ನು ವಿತರಿಸಲಾಯಿತು.

ಬೆಳ್ತಂಗಡಿ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಮಾತನಾಡಿದರು. ಸಹಾಯಕ ನಿರ್ವಾಹಕ ಕೃಪೇಶ್ ಸ್ವಾಗತಿಸಿ ನಿರೂಪಿಸಿದರು.

ಈ ಸಂದರ್ಭದಲ್ಲಿ ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು, ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಪೋಷಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ: ತರಗತಿ ಕೊಠಡಿ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya
error: Content is protected !!