25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ.

ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ಆದೇಶ ಮಾಡಿದ್ದರು ಈ ಆದೇಶವನ್ನು ಪ್ರಶ್ನಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಗಡಿಪಾರು ಆದೇಶವನ್ನು ರದ್ದುಪಡಿಸಿ ಆದೇಶ ನೀಡಿತ್ತು ಹಾಗೂ ಅವರನ್ನು ಗಡಿಪಾರು ಮಾಡಬೇಕಾದರೆ ಮತ್ತೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

ಅದರಂತೆ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವ ಬಗ್ಗೆ ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ಮತ್ತೆ ನೋಟೀಸ್ ನೀಡಿದೆ. ಲಭ್ಯ ಮಾಹಿತಿಯಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಡಿ.8 ರಂದು ಪುತ್ತೂರು ಎಸಿ ಮುಂದೆ ಹಾಜರಾಗಲು ನೋಟಿಸ್ ಜಾರಿ ಮಾಡಿದೆ. ಈಗ ನೀಡಿರುವ ನೋಟೀಸ್ ನಲ್ಲಿ ಹೊಸದಾಗಿ ದಾಖಲಾಗಿರುವ ಪ್ರಕರಣಗಳನ್ನು ಸೇರಿಸಿ ನೋಟೀಸ್ ನೀಡಲಾಗಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿವಾದ ಮತ್ತೆ ಮುನ್ನೆಲೆಗೆ ಬಂದಂತಾಗಿದೆ.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕವಿ ಸಮ್ಮಿಲನ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya
error: Content is protected !!