24.2 C
ಪುತ್ತೂರು, ಬೆಳ್ತಂಗಡಿ
September 9, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ.

ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ಆದೇಶ ಮಾಡಿದ್ದರು ಈ ಆದೇಶವನ್ನು ಪ್ರಶ್ನಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಗಡಿಪಾರು ಆದೇಶವನ್ನು ರದ್ದುಪಡಿಸಿ ಆದೇಶ ನೀಡಿತ್ತು ಹಾಗೂ ಅವರನ್ನು ಗಡಿಪಾರು ಮಾಡಬೇಕಾದರೆ ಮತ್ತೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

ಅದರಂತೆ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವ ಬಗ್ಗೆ ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ಮತ್ತೆ ನೋಟೀಸ್ ನೀಡಿದೆ. ಲಭ್ಯ ಮಾಹಿತಿಯಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಡಿ.8 ರಂದು ಪುತ್ತೂರು ಎಸಿ ಮುಂದೆ ಹಾಜರಾಗಲು ನೋಟಿಸ್ ಜಾರಿ ಮಾಡಿದೆ. ಈಗ ನೀಡಿರುವ ನೋಟೀಸ್ ನಲ್ಲಿ ಹೊಸದಾಗಿ ದಾಖಲಾಗಿರುವ ಪ್ರಕರಣಗಳನ್ನು ಸೇರಿಸಿ ನೋಟೀಸ್ ನೀಡಲಾಗಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿವಾದ ಮತ್ತೆ ಮುನ್ನೆಲೆಗೆ ಬಂದಂತಾಗಿದೆ.

Related posts

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!