July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ದೋಷಾ ರೋಪಪಟ್ಟಿನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ವರದಿಗಳನ್ನಷ್ಟೆ ಕೋರ್ಟ್‌ಗೆ ಸಲ್ಲಿಸಲಾಗಿದೆ. ತನಿಖಾ ಹಂತದಲ್ಲಿರುವ ಪ್ರಕರಣದ ಬಗ್ಗೆ ಹೆಚ್ಚು ಚರ್ಚೆ ಮಾಡಲು ಆಗುವುದಿಲ್ಲ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವ‌ರ್ ತಿಳಿಸಿದ್ದಾರೆ.

ಬೆಂಗಳೂರಿನ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ನಾನಾಗಲಿ, ಮುಖ್ಯಮಂತ್ರಿಗಳಾಗಲಿ ವಿಶೇಷ ತನಿಖಾ ತಂಡದ (ಎಸ್ ಐಟಿ) ಅಧಿಕಾರಿಗಳಿಗೆ ಕರೆ ಮಾಡಿ ಮಾತಾಡಿಲ್ಲ. ಎಸ್‌ಐಟಿ ತಂಡಕ್ಕೆ ಸ್ವಾತಂತ್ರ್ಯವಾಗಿ ತನಿಖೆ ನಡೆಸಲು ಅನುಮತಿ ಕೊಟ್ಟಿದ್ದೇವೆ. ಈ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ತನಿಖೆ ಸೂಕ್ತವಾಗಿ ಸಾಗಬೇಕಿದೆ ಎಂದು ಹೇಳಿದರು.

ಧರ್ಮಸ್ಥಳ ಪ್ರಕರಣದ ತನಿಖೆ ಸರಿಯಾಗಿ ಮಾಡಲಿಲ್ಲ ಎಂದಾದರೆ, ಪ್ರಕರಣದ ಬಗ್ಗೆ ಸೂಕ್ತ ಮಾಹಿತಿ ಒದಗಿಸದಿದ್ದಾಗ, ಸರಿಯಾದ ತನಿಖೆ ನಡೆಯಧಿದ್ದಾಗ ಕೋರ್ಟ್ ತಡೆ ನೀಡುತ್ತದೆ. ಧರ್ಮಸ್ಥಳ ಪ್ರಕರಣದಲ್ಲಿ ಇನ್ನೂ ತನಿಖೆ ಮುಗಿದಿಲ್ಲ. ಮುಂದೆ ತನಿಖೆ ಎತ್ತ ಸಾಗುತ್ತದೆ ಎಂಬುದನ್ನು ಕಾದು ನೋಡಿ. ಚಾರ್ಜ್‌ ಶೀಟ್ ಕೊಟ್ಟ ಕೂಡಲೇ ಪ್ರಕರಣ ಮುಗಿದಿದೆ ಎಂದರ್ಥವಲ್ಲ. ತನಿಖೆ ಮಾಡಿದಾಗ ಬುರುಡೆ ಸಹಿತ ಪ್ರಕರಣಗಳಲ್ಲಿ ಯಾರ್ಯಾರು ಶಾಮೀಲಾಗಿದ್ದಾರೆ ಎಂಬಿತ್ಯಾದಿ ವಿಷಯಗಳನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.

Related posts

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬರೆಂಗಾಯ ಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಚೊಚ್ಚಲ ಪ್ರಯತ್ನದಲ್ಲೇ ಗಮನ ಸೆಳೆದ ವಿದ್ವತ್ ನ NEET ಫಲಿತಾಂಶ: ಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ ವಿದ್ಯಾರ್ಥಿಗಳು

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya
error: Content is protected !!