22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆಯು ಅಧ್ಯಕ್ಷೆ ಜಯಂತಿ ಎಂ.ಕೆ ರವರ ಅಧ್ಯಕ್ಷತೆಯಲ್ಲಿ ಭಾರತ್ ಮಾತಾ ಸಭಾಭವನದಲ್ಲಿ ನಡೆಯಿತು.

ಮಕ್ಕಳ ಗ್ರಾಮ ಸಭೆಯ ಪೂರ್ವಾಭಾವಿಯಾಗಿ ಮಕ್ಕಳಿಗೆ ಚಿತ್ರಕಲೆ, ದೇಶಭಕ್ತಿ ಗೀತೆ ಸ್ಪರ್ಧೆ ಆಯೋಜಿಸಿದ್ದು ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ. ಪ್ರಾಸ್ತಾವಿಕವಾಗಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.
ಮಕ್ಕಳ ಹಕ್ಕುಗಳು ಹಾಗೂ ಮಾನವ ಹಕ್ಕುಗಳ ಬಗ್ಗೆ ಉಷಾ ಕಾಮತ್ ಇವರು ಮಾಹಿತಿ ನೀಡಿದರು. ಲಲಿತಾ ಇವರು ಮಕ್ಕಳಿಗೆ ವ್ಯಕ್ತಿತ್ವ ವಿಕಸನದ ಕುರಿತು ಮಾಹಿತಿ ನೀಡಿದರು.

ಗ್ರಾಮಸಭೆಯ ಅಧ್ಯಕ್ಷತೆ ವಹಿಸಿದ ಕರ್ನೋಡಿ ಶಾಲಾ ವಿದ್ಯಾರ್ಥಿ ಮಹಮ್ಮದ್ ಮುರ್ಷಿದ್ ಇವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಗ್ರಾಮಸಭೆಯಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳ ಬೇಡಿಕೆಗಳನ್ನು ಸ್ವೀಕರಿಸಲಾಯಿತು.

ಗ್ರಾ.ಪಂ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ, ಸದಸ್ಯರಾದ ಪ್ರಸಾದ್ ಶೆಟ್ಟಿ, ರೇವತಿ, ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ., ಮುಖ್ಯ ಅತಿಥಿಗಳಾಗಿ ಆರ್ಥಿಕ ಸಮಾಲೋಚನಕಾರರಾದ ಉಷಾ ಕಾಮತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಲಲಿತಾ, ಶಾಲಾ ಶಿಕ್ಷಕರು, ಪಂ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಪ್ರಮುಖವಾಗಿ ಸಭೆಯ ಕೇಂದ್ರ ಬಿಂದುಗಳಾದ ಮಕ್ಕಳು ಉಪಸ್ಥಿತರಿದ್ದರು.


ಪಂಚಾಯತ್ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಬಿಲ್ ಕಲೆಕ್ಟರ್ ಮೋಹನ್ ವಂದಿಸಿದರು.

Related posts

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya
error: Content is protected !!