25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

ಉಜಿರೆ:ಡಿ6. ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.6 ರಂದು ದ.ಕ ಹಾಗೂ ಉಡುಪಿ ಜಿಲ್ಲೆಯ ಐ.ಸಿ.ಎಸ್.ಇ (Indian Certificate of Secondary Education) ಹಾಗೂ ಸಿ.ಬಿ.ಎಸ್.ಇ (Central Board of Secondary Education) ಶಾಲೆಗಳ ಸಹಯೋಗದೊಂದಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ “SDM SPLASH 2025” ಅಂತರ ಶಾಲಾ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಆಯೋಜಿಸಲಾಗಿತ್ತು.

ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಕಾರ್ಯಕ್ರಮ ಉದ್ಘಾಟಿಸಿ ಆಗಮಿಸಿದ ಎಲ್ಲಾ ಶಾಲೆಯ ಸ್ಪರ್ಧೆಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎಮ್. ಜನಾರ್ಧನ್ ಹಾಗೂ ಮಂಗಳೂರಿನ ಜೈ ಹಿಂದ್ ಸ್ವಿಮ್ಮಿಂಗ್ ಕ್ಲಬ್ ಮುಖ್ಯ ಈಜು ತರಬೇತುದಾರರಾದ ಶ್ರೀ ರಾಮಕೃಷ್ಣ ರಾವ್ ಆಗಮಿಸಿ ವಿಜೇತರಾದ ಸ್ಪರ್ಧಿಗಳನ್ನು ಅಭಿನಂದಿಸಿ ಬಹುಮಾನ ವಿತರಿಸಿದರು.

ಸ್ಪರ್ಧೆಯಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆಯ 20 ಶಾಲೆಗಳಿಂದ ಸುಮಾರು 200 ಸ್ಪರ್ಧಿಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಮ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್, ಮಂಗಳೂರಿನ ವಿ ವನ್ ಆಕ್ವಾ ಸೆಂಟರ್ ನ ನಿರ್ದೇಶಕರಾದ ನವೀನ್, ಎಸ್.ಡಿ. ಎಮ್ ಸ್ಪೋರ್ಟ್ಸ್ ಕ್ಲಬ್ ಕ್ರೀಡಾ ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕಿ ನೀತು ಪ್ರಸಾದ್ ಹಾಗೂ ಉಜಿರೆ ಎಸ್.ಡಿ.ಎಮ್ ಬಿ.ಎನ್.ವೈ.ಎಸ್ ಕಾಲೇಜಿನ ಪಿ.ಡಿ ಶ್ರೀ ಧರ್ಮೇಂದ್ರ ಇವರು ಕಾರ್ಯಕ್ರಮ ನಿರೂಪಿಸಿದರು.

Related posts

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಕ್ಕ ಕೆಫೆಗೆ ಭೇಟಿ : ಗುಣಮಟ್ಟದ ಊಟಕ್ಕೆ ಮೆಚ್ಚುಗೆ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!