July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

ಉಜಿರೆ: ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ವನಜಾ ಜೋಶಿ ಅವರ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನದ ಬಿಡುಗಡೆ ಹಾಗೂ ಗಜಲ್ ರಚನಾ ಕಾರ್ಯಾಗಾರ ನೆರವೇರಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ ಕಾರ್ಯಕ್ರಮ ಉದ್ಘಾಟಿಸಿದರು.

ಎನ್.ವಿ. ಡಿಗ್ರಿ ಕಾಲೇಜು ಕಲಬುರಗಿಯ ಗಜಲ್ ಕವಿ ಹಾಗೂ ಕನ್ನಡ ಪ್ರಾಧ್ಯಾಪಕ ಡಾ. ಮಲ್ಲಿನಾಥ ಎಸ್ ತಳವಾರ ಗಜಲ್ ರಚನಾ ಕಾರ್ಯಾಗಾರ ನಡೆಸಿ ಗಜಲ್ ಸಾಹಿತ್ಯದ ವಿನ್ಯಾಸ, ಪರಂಪರೆ ಮತ್ತು ತಂತ್ರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಆಳವಾದ ತಿಳಿವಳಿಕೆ ನೀಡಿದರು.

ಸಾಹಿತಿ ಸುಮನಾ ಆರ್ ಹೇರ್ಳೆ ಪುಸ್ತಕ ಪರಿಚಯ ನೀಡಿ, ಕೃತಿಯ ಭಾವನಾತ್ಮಕ ವ್ಯಾಪ್ತಿ ಮತ್ತು ಸಂಗತಿಯನ್ನೆತ್ತಿ ಹಿಡಿದರು. ಕೃತಿಕಾರರಾದ ವನಜಾ ಜೋಶಿ ತಮ್ಮ ಬರವಣಿಗೆಯ ಅನುಭವ ಹಂಚಿಕೊಂಡರು.

ಸಾಹಿತ್ಯಾಸಕ್ತರು, ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡ ಸ್ವಾಗತಿಸಿದರು. ಬಿ.ಎಡ್. ವಿದ್ಯಾರ್ಥಿಗಳಾದ ಸಾಯಿಧೃತಿ, ಗಾಯನ ಮತ್ತು ವಿನೀಶ ಪ್ರಾರ್ಥಿಸಿ, ಅತುಲ್ ದಾಮ್ಲೆ ವಂದಿಸಿ, ಅರುಣಾ ಶ್ರೀನಿವಾಸ ಕಾರ್ಯಕ್ರಮ ನಿರೂಪಿಸಿದರು.

Related posts

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಸದಸ್ಯರ ನಿಧಿಯಿಂದ ಮಂಜೂರುಗೊಂಡ ರೂ. 1.50 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನ 121 ಶಾಲೆಗಳ ಸ್ಮಾರ್ಟ್ ಕ್ಲಾಸ್ ಟಿ.ವಿ ಹಸ್ತಾಂತರ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!