26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

ಕೊಲ್ಲಿ: ಗೋಪಾಲ ಪೂಜಾರಿ ಕೊಲ್ಲಿ ಮಾಲಕತ್ವದ ಶ್ರೀ ದುರ್ಗಾ ಕಾಂಪ್ಲೆಕ್ಸ್ ಇದರ ಉದ್ಘಾಟನಾ ಸಮಾರಂಭವು ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್‌ನ ಶುಭಾರಂಭವು ಡಿ.5ರಂದು ಜರುಗಿತು.

ಕಾಂಪ್ಲೆಕ್ಸ್‌ನ ಉದ್ಘಾಟನೆಯನ್ನು ಉಜಿರೆ ಸಂಧ್ಯಾ ಟ್ರೇಡರ್‍ಸ್ ಮಾಲಕ ರಾಜೇಶ್ ಪೈ ದೀಪ ಬೆಳಗಿಸಿ ನೆರವೇರಿಸಿದರು. ತಾ.ಪಂ. ಮಾಜಿ ಅಧ್ಯಕ್ಷ ಮುಕುಂದ ಸುವರ್ಣ, ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕಾಂಜಾನು, ಸದಸ್ಯ ಕೃಷ್ಣಪ್ಪ ಪೂಜಾರಿ, ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ, ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಕೇಶವ ಫಡಕೆ, ಲಿಂಗಪ್ಪ ಪೂಜಾರಿ ಪಾಲ್ತ್ಯಾರು ಉಪಸ್ಥಿತರಿದ್ದು, ಶುಭ ಕೋರಿದರು.

ಈ ಸಂದರ್ಭದಲ್ಲಿ ಧರ್ಣಪ್ಪ ಶೆಟ್ಟಿ ಹಾಗೂ ಅರುಣ ಡಿ. ಶೆಟ್ಟಿ ಕೊಲ್ಲಿ ದಂಪತಿಗಳನ್ನು ಸನ್ಮಾನಿಸಲಾಯಿತು.

ಗೋಪಾಲ ಪೂಜಾರಿ ಸ್ವಾಗತಿಸಿ, ವಿನಯಚಂದ್ರ ನಡುಬೈಲು ಕಾರ್ಯಕ್ರಮ ನಿರೂಪಿಸಿ, ಶ್ರೀಧರ ಕೆದ್ದು ವಂದಿಸಿದರು. ಶುಭಾರಂಭಕ್ಕೆ ಆಗಮಿಸಿದ ಗಣ್ಯರನ್ನು ಮಾಲಕರಾದ ಶ್ರೀಮತಿ ಶಾಲಿನಿ ಗೋಪಾಲ ಪೂಜಾರಿ ಮತ್ತು ಮಕ್ಕಳು ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದರು.

Related posts

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya
error: Content is protected !!