22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

ಕೊಲ್ಲಿ: ಗೋಪಾಲ ಪೂಜಾರಿ ಕೊಲ್ಲಿ ಮಾಲಕತ್ವದ ಶ್ರೀ ದುರ್ಗಾ ಕಾಂಪ್ಲೆಕ್ಸ್ ಇದರ ಉದ್ಘಾಟನಾ ಸಮಾರಂಭವು ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್‌ನ ಶುಭಾರಂಭವು ಡಿ.5ರಂದು ಜರುಗಿತು.

ಕಾಂಪ್ಲೆಕ್ಸ್‌ನ ಉದ್ಘಾಟನೆಯನ್ನು ಉಜಿರೆ ಸಂಧ್ಯಾ ಟ್ರೇಡರ್‍ಸ್ ಮಾಲಕ ರಾಜೇಶ್ ಪೈ ದೀಪ ಬೆಳಗಿಸಿ ನೆರವೇರಿಸಿದರು. ತಾ.ಪಂ. ಮಾಜಿ ಅಧ್ಯಕ್ಷ ಮುಕುಂದ ಸುವರ್ಣ, ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕಾಂಜಾನು, ಸದಸ್ಯ ಕೃಷ್ಣಪ್ಪ ಪೂಜಾರಿ, ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ, ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಕೇಶವ ಫಡಕೆ, ಲಿಂಗಪ್ಪ ಪೂಜಾರಿ ಪಾಲ್ತ್ಯಾರು ಉಪಸ್ಥಿತರಿದ್ದು, ಶುಭ ಕೋರಿದರು.

ಈ ಸಂದರ್ಭದಲ್ಲಿ ಧರ್ಣಪ್ಪ ಶೆಟ್ಟಿ ಹಾಗೂ ಅರುಣ ಡಿ. ಶೆಟ್ಟಿ ಕೊಲ್ಲಿ ದಂಪತಿಗಳನ್ನು ಸನ್ಮಾನಿಸಲಾಯಿತು.

ಗೋಪಾಲ ಪೂಜಾರಿ ಸ್ವಾಗತಿಸಿ, ವಿನಯಚಂದ್ರ ನಡುಬೈಲು ಕಾರ್ಯಕ್ರಮ ನಿರೂಪಿಸಿ, ಶ್ರೀಧರ ಕೆದ್ದು ವಂದಿಸಿದರು. ಶುಭಾರಂಭಕ್ಕೆ ಆಗಮಿಸಿದ ಗಣ್ಯರನ್ನು ಮಾಲಕರಾದ ಶ್ರೀಮತಿ ಶಾಲಿನಿ ಗೋಪಾಲ ಪೂಜಾರಿ ಮತ್ತು ಮಕ್ಕಳು ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದರು.

Related posts

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!