25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

ಮುಂಡೂರು: ಶ್ರೀ ನಾಗಾಂಬಿಕಾ ದೇವಸ್ಥಾನ, ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಮುಂಡೂರು ಶ್ರೀ ನಾಗಾಂಬಿಕ ಭಜನಾ ಮಂಡಳಿ ಶ್ರೀ ಕ್ಷೇತ್ರ ಮಂಗಳಗಿರಿ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇದರ ಸಹಯೋಗದೊಂದಿಗೆ ಡಿ.14ರಂದು ರಾತ್ರಿ ಗಂಟೆ 7ರಿಂದ ೮ರವರೆಗೆ ಮುಂಡೂರು ಮಂಗಳಗಿರಿ ಶ್ರೀ ಕ್ಷೇತ್ರದ ವಠಾರದಲ್ಲಿ ಬೆಳ್ತಂಗಡಿ ತಾಲೂಕಿನ ಸುಮಾರು 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳ ಭಜಕರಿಂದ ಏಕಕಾಲದಲ್ಲಿ ‘ ಮಂಗಳಗಿರಿ ಕುಣಿತ ಭಜನೋತ್ಸವ’ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರಾದ ರಾಜೀವ್ ಅವರು ತಿಳಿಸಿದ್ದಾರೆ.

ಶ್ರೀ ನಾಗಾಂಬಿಕಾ ಕ್ಷೇತ್ರ ಮಂಗಳಗಿರಿಯಲ್ಲಿ 12 ವರ್ಷಗಳ ನಂತರ ನಡೆಯಲಿರುವ ದೇವಸ್ಥಾನದ ಹಾಗೂ ದೈವಗಳ ಗುಡಿಗೋಪುರಗಳ ನವೀಕರಣ ಹಾಗೂ ಬ್ರಹ್ಮಕಲಶೋತ್ಸದ ಪೂರ್ವಭಾವಿಯಾಗಿ ಅಗಲಿರುವ ಕೆಲಸ ಕಾರ್ಯಗಳು ಶೀಘ್ರವಾಗಿ ನೆರವೇರಲು ಹಾಗೂ ಗ್ರಾಮದ ಮತ್ತು ಭಕ್ತರ ಶ್ರೇಯೋಭಿವೃದ್ಧಿಗೋಸ್ಕರ ಶ್ರೀ ನಾಗಬಿಂಕ ಭಜನಾ ಮಂಡಳಿ ಸದಸ್ಯರಿಂದ ಹಾಗೂ ಪೋಷಕರಿಂದ ದಿನಕ್ಕೆ ಒಬ್ಬರ ನೇತೃತ್ವದಲ್ಲಿ 48 ದಿನಗಳ ಭಜನಾ ಕಾರ್ಯಕ್ರಮವು ನಡೆಯುತ್ತಿದ್ದು, ಡಿ.11ರಂದು ಭಜನೆಯ ಮಂಗಳೋತ್ಸವ ಕುಣಿತ ಭಜನಾ ಕಾರ್ಯಕ್ರಮ ಹಾಗೂ ರಂಗ ಪೂಜೆ ಸೇವೆ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಭಕ್ತರು ಪೂರ್ಣ ಸಹಕಾರ ನೀಡುವಂತೆ ರಾಜೀವ್ ಅವರು ವಿನಂತಿಸಿಕೊಂಡಿದ್ದಾರೆ.

Related posts

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya
error: Content is protected !!