22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

ಮುಂಡೂರು: ಶ್ರೀ ನಾಗಾಂಬಿಕಾ ದೇವಸ್ಥಾನ, ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಮುಂಡೂರು ಶ್ರೀ ನಾಗಾಂಬಿಕ ಭಜನಾ ಮಂಡಳಿ ಶ್ರೀ ಕ್ಷೇತ್ರ ಮಂಗಳಗಿರಿ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇದರ ಸಹಯೋಗದೊಂದಿಗೆ ಡಿ.14ರಂದು ರಾತ್ರಿ ಗಂಟೆ 7ರಿಂದ ೮ರವರೆಗೆ ಮುಂಡೂರು ಮಂಗಳಗಿರಿ ಶ್ರೀ ಕ್ಷೇತ್ರದ ವಠಾರದಲ್ಲಿ ಬೆಳ್ತಂಗಡಿ ತಾಲೂಕಿನ ಸುಮಾರು 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳ ಭಜಕರಿಂದ ಏಕಕಾಲದಲ್ಲಿ ‘ ಮಂಗಳಗಿರಿ ಕುಣಿತ ಭಜನೋತ್ಸವ’ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರಾದ ರಾಜೀವ್ ಅವರು ತಿಳಿಸಿದ್ದಾರೆ.

ಶ್ರೀ ನಾಗಾಂಬಿಕಾ ಕ್ಷೇತ್ರ ಮಂಗಳಗಿರಿಯಲ್ಲಿ 12 ವರ್ಷಗಳ ನಂತರ ನಡೆಯಲಿರುವ ದೇವಸ್ಥಾನದ ಹಾಗೂ ದೈವಗಳ ಗುಡಿಗೋಪುರಗಳ ನವೀಕರಣ ಹಾಗೂ ಬ್ರಹ್ಮಕಲಶೋತ್ಸದ ಪೂರ್ವಭಾವಿಯಾಗಿ ಅಗಲಿರುವ ಕೆಲಸ ಕಾರ್ಯಗಳು ಶೀಘ್ರವಾಗಿ ನೆರವೇರಲು ಹಾಗೂ ಗ್ರಾಮದ ಮತ್ತು ಭಕ್ತರ ಶ್ರೇಯೋಭಿವೃದ್ಧಿಗೋಸ್ಕರ ಶ್ರೀ ನಾಗಬಿಂಕ ಭಜನಾ ಮಂಡಳಿ ಸದಸ್ಯರಿಂದ ಹಾಗೂ ಪೋಷಕರಿಂದ ದಿನಕ್ಕೆ ಒಬ್ಬರ ನೇತೃತ್ವದಲ್ಲಿ 48 ದಿನಗಳ ಭಜನಾ ಕಾರ್ಯಕ್ರಮವು ನಡೆಯುತ್ತಿದ್ದು, ಡಿ.11ರಂದು ಭಜನೆಯ ಮಂಗಳೋತ್ಸವ ಕುಣಿತ ಭಜನಾ ಕಾರ್ಯಕ್ರಮ ಹಾಗೂ ರಂಗ ಪೂಜೆ ಸೇವೆ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಭಕ್ತರು ಪೂರ್ಣ ಸಹಕಾರ ನೀಡುವಂತೆ ರಾಜೀವ್ ಅವರು ವಿನಂತಿಸಿಕೊಂಡಿದ್ದಾರೆ.

Related posts

ಸೆ.7: ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya
error: Content is protected !!