22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆಯು ಅಧ್ಯಕ್ಷೆ ಜಯಂತಿ ಎಂ.ಕೆ ರವರ ಅಧ್ಯಕ್ಷತೆಯಲ್ಲಿ ಭಾರತ್ ಮಾತಾ ಸಭಾಭವನದಲ್ಲಿ ನಡೆಯಿತು.

ಮಕ್ಕಳ ಗ್ರಾಮ ಸಭೆಯ ಪೂರ್ವಾಭಾವಿಯಾಗಿ ಮಕ್ಕಳಿಗೆ ಚಿತ್ರಕಲೆ, ದೇಶಭಕ್ತಿ ಗೀತೆ ಸ್ಪರ್ಧೆ ಆಯೋಜಿಸಿದ್ದು ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ. ಪ್ರಾಸ್ತಾವಿಕವಾಗಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.
ಮಕ್ಕಳ ಹಕ್ಕುಗಳು ಹಾಗೂ ಮಾನವ ಹಕ್ಕುಗಳ ಬಗ್ಗೆ ಉಷಾ ಕಾಮತ್ ಇವರು ಮಾಹಿತಿ ನೀಡಿದರು. ಲಲಿತಾ ಇವರು ಮಕ್ಕಳಿಗೆ ವ್ಯಕ್ತಿತ್ವ ವಿಕಸನದ ಕುರಿತು ಮಾಹಿತಿ ನೀಡಿದರು.

ಗ್ರಾಮಸಭೆಯ ಅಧ್ಯಕ್ಷತೆ ವಹಿಸಿದ ಕರ್ನೋಡಿ ಶಾಲಾ ವಿದ್ಯಾರ್ಥಿ ಮಹಮ್ಮದ್ ಮುರ್ಷಿದ್ ಇವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಗ್ರಾಮಸಭೆಯಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳ ಬೇಡಿಕೆಗಳನ್ನು ಸ್ವೀಕರಿಸಲಾಯಿತು.

ಗ್ರಾ.ಪಂ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ, ಸದಸ್ಯರಾದ ಪ್ರಸಾದ್ ಶೆಟ್ಟಿ, ರೇವತಿ, ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ., ಮುಖ್ಯ ಅತಿಥಿಗಳಾಗಿ ಆರ್ಥಿಕ ಸಮಾಲೋಚನಕಾರರಾದ ಉಷಾ ಕಾಮತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಲಲಿತಾ, ಶಾಲಾ ಶಿಕ್ಷಕರು, ಪಂ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಪ್ರಮುಖವಾಗಿ ಸಭೆಯ ಕೇಂದ್ರ ಬಿಂದುಗಳಾದ ಮಕ್ಕಳು ಉಪಸ್ಥಿತರಿದ್ದರು.


ಪಂಚಾಯತ್ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಬಿಲ್ ಕಲೆಕ್ಟರ್ ಮೋಹನ್ ವಂದಿಸಿದರು.

Related posts

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya
error: Content is protected !!