September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

ಉಜಿರೆ: ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ವನಜಾ ಜೋಶಿ ಅವರ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನದ ಬಿಡುಗಡೆ ಹಾಗೂ ಗಜಲ್ ರಚನಾ ಕಾರ್ಯಾಗಾರ ನೆರವೇರಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ ಕಾರ್ಯಕ್ರಮ ಉದ್ಘಾಟಿಸಿದರು.

ಎನ್.ವಿ. ಡಿಗ್ರಿ ಕಾಲೇಜು ಕಲಬುರಗಿಯ ಗಜಲ್ ಕವಿ ಹಾಗೂ ಕನ್ನಡ ಪ್ರಾಧ್ಯಾಪಕ ಡಾ. ಮಲ್ಲಿನಾಥ ಎಸ್ ತಳವಾರ ಗಜಲ್ ರಚನಾ ಕಾರ್ಯಾಗಾರ ನಡೆಸಿ ಗಜಲ್ ಸಾಹಿತ್ಯದ ವಿನ್ಯಾಸ, ಪರಂಪರೆ ಮತ್ತು ತಂತ್ರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಆಳವಾದ ತಿಳಿವಳಿಕೆ ನೀಡಿದರು.

ಸಾಹಿತಿ ಸುಮನಾ ಆರ್ ಹೇರ್ಳೆ ಪುಸ್ತಕ ಪರಿಚಯ ನೀಡಿ, ಕೃತಿಯ ಭಾವನಾತ್ಮಕ ವ್ಯಾಪ್ತಿ ಮತ್ತು ಸಂಗತಿಯನ್ನೆತ್ತಿ ಹಿಡಿದರು. ಕೃತಿಕಾರರಾದ ವನಜಾ ಜೋಶಿ ತಮ್ಮ ಬರವಣಿಗೆಯ ಅನುಭವ ಹಂಚಿಕೊಂಡರು.

ಸಾಹಿತ್ಯಾಸಕ್ತರು, ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡ ಸ್ವಾಗತಿಸಿದರು. ಬಿ.ಎಡ್. ವಿದ್ಯಾರ್ಥಿಗಳಾದ ಸಾಯಿಧೃತಿ, ಗಾಯನ ಮತ್ತು ವಿನೀಶ ಪ್ರಾರ್ಥಿಸಿ, ಅತುಲ್ ದಾಮ್ಲೆ ವಂದಿಸಿ, ಅರುಣಾ ಶ್ರೀನಿವಾಸ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಮುಡಾ ಹಗರಣ: ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya
error: Content is protected !!