23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

ಮುಂಡೂರು: ಶ್ರೀ ನಾಗಾಂಬಿಕಾ ದೇವಸ್ಥಾನ, ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಮುಂಡೂರು ಶ್ರೀ ನಾಗಾಂಬಿಕ ಭಜನಾ ಮಂಡಳಿ ಶ್ರೀ ಕ್ಷೇತ್ರ ಮಂಗಳಗಿರಿ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇದರ ಸಹಯೋಗದೊಂದಿಗೆ ಡಿ.14ರಂದು ರಾತ್ರಿ ಗಂಟೆ 7ರಿಂದ ೮ರವರೆಗೆ ಮುಂಡೂರು ಮಂಗಳಗಿರಿ ಶ್ರೀ ಕ್ಷೇತ್ರದ ವಠಾರದಲ್ಲಿ ಬೆಳ್ತಂಗಡಿ ತಾಲೂಕಿನ ಸುಮಾರು 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳ ಭಜಕರಿಂದ ಏಕಕಾಲದಲ್ಲಿ ‘ ಮಂಗಳಗಿರಿ ಕುಣಿತ ಭಜನೋತ್ಸವ’ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರಾದ ರಾಜೀವ್ ಅವರು ತಿಳಿಸಿದ್ದಾರೆ.

ಶ್ರೀ ನಾಗಾಂಬಿಕಾ ಕ್ಷೇತ್ರ ಮಂಗಳಗಿರಿಯಲ್ಲಿ 12 ವರ್ಷಗಳ ನಂತರ ನಡೆಯಲಿರುವ ದೇವಸ್ಥಾನದ ಹಾಗೂ ದೈವಗಳ ಗುಡಿಗೋಪುರಗಳ ನವೀಕರಣ ಹಾಗೂ ಬ್ರಹ್ಮಕಲಶೋತ್ಸದ ಪೂರ್ವಭಾವಿಯಾಗಿ ಅಗಲಿರುವ ಕೆಲಸ ಕಾರ್ಯಗಳು ಶೀಘ್ರವಾಗಿ ನೆರವೇರಲು ಹಾಗೂ ಗ್ರಾಮದ ಮತ್ತು ಭಕ್ತರ ಶ್ರೇಯೋಭಿವೃದ್ಧಿಗೋಸ್ಕರ ಶ್ರೀ ನಾಗಬಿಂಕ ಭಜನಾ ಮಂಡಳಿ ಸದಸ್ಯರಿಂದ ಹಾಗೂ ಪೋಷಕರಿಂದ ದಿನಕ್ಕೆ ಒಬ್ಬರ ನೇತೃತ್ವದಲ್ಲಿ 48 ದಿನಗಳ ಭಜನಾ ಕಾರ್ಯಕ್ರಮವು ನಡೆಯುತ್ತಿದ್ದು, ಡಿ.11ರಂದು ಭಜನೆಯ ಮಂಗಳೋತ್ಸವ ಕುಣಿತ ಭಜನಾ ಕಾರ್ಯಕ್ರಮ ಹಾಗೂ ರಂಗ ಪೂಜೆ ಸೇವೆ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಭಕ್ತರು ಪೂರ್ಣ ಸಹಕಾರ ನೀಡುವಂತೆ ರಾಜೀವ್ ಅವರು ವಿನಂತಿಸಿಕೊಂಡಿದ್ದಾರೆ.

Related posts

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya
error: Content is protected !!