22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭನೆಯ ಸ್ಥಾಪನೆ ಡಿ.೫ರಂದು ವೇದಮೂರ್ತಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದಲ್ಲಿ ಶ್ರೀ ಪ್ರಸಾದ್ ಮುನಿಯಂಗಳರವರ ವಾಸ್ತುಶಿಲ್ಪ ಶಾಸ್ತ್ರದ ಪ್ರಕಾರ ವಿವಿಧ ವೈದಿಕ ಕಾರ್ಯಕ್ರಮಗಳ ಮೂಲಕ ಪ್ರತಿಷ್ಠಾಪನೆ ನಡೆಯಿತು.

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಜಗದ್ಗುರು ಪೀಠದ ಪೀಠಧೀಶರಾದ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ ಸ್ವಾಮೀಜಿಯವರು ಭೇಟಿ ನೀಡಿ ಶುಭ ಹಾರೈಸಿದರು.

ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಿರುವ ನೂತನ ಶಿಲಾಮಯ ಧ್ವಜಸ್ಥಂಭವನ್ನು ಬಜಗೋಳಿಯ ಶಿಲ್ಪಿ ಸುಧಾಕರ ಡೋಂಗ್ರೆ ಕೆಟ್ಟಿದ್ದು ಉಜಿರೆಯಿಂದ ಡಿ.೪ರಂದು ಭವ್ಯವಾದ ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ತರಲಾಗಿತ್ತು.

ಬೆಳಿಗ್ಗೆ ದೇವಸ್ಥಾನದಲ್ಲಿ ಗಣ ಹೋಮ, ವಿವಿಧ ಪೂಜಾ ವಿಧಿ ವಿಧಾನ ನೆರವೇರಿ, ಮಧ್ಯಾಹ್ನ ಮಹಾ ಪೂಜೆ, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಜಾತ್ರೋತ್ಸವ ಸಮಿತಿಯ ಗೌರವ ಅಧ್ಯಕ್ಷ ರಕ್ಷಿತ್ ಶಿವರಾಮ್, ಅಧ್ಯಕ್ಷ ಸುನೀಲ್ ಕನ್ಯಾಡಿ, ಸದಸ್ಯರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಗೌಡ, ಸದಸ್ಯರು, ಅರ್ಚಕ ವೃಂದ, ಊರ ಭಕ್ತ ವೃಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya
error: Content is protected !!