24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಕರುನಾಡು Got ಟ್ಯಾಲೆಂಟ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಉಜಿರೆಯ ಹಿಪ್-ಬಾಯ್ಸ್ ನೃತ್ಯ ತಂಡ

ಉಜಿರೆ: ಕರ್ನಾಟಕದ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುತ್ತಿರುವ, ಎನ್.ಪಿ ಪ್ರೊಡಕ್ಷನ್ ನಲ್ಲಿ ಸ್ಪಂದನ ಟಿ.ವಿ. ಪ್ರಸ್ತುತಪಡಿಸುವ ರಾಜ್ಯದ ಅತೀ ದೊಡ್ಡ ಮಲ್ಟಿ ಟ್ಯಾಲೆಂಟ್ ರಿಯಾಲಿಟಿ ಶೋ ಕರುನಾಡು Got ಟ್ಯಾಲೆಂಟ್ ನ ಸೀಸನ್ 2 ಕ್ಕೆ ಉಜಿರೆಯ ಹಿಪ್-ಬಾಯ್ಸ್ ಡಾನ್ಸ್ ಕ್ರೀವ್ ತಂಡವು ಆಯ್ಕೆಯಾಗುವ ಮೂಲಕ ಸ್ಥಳೀಯ ಹೆಗ್ಗಳಿಕೆಯನ್ನು ಹೆಚ್ಚಿಸಿದೆ.

ಇತ್ತೀಚೆಗೆ ನಡೆದ ಮೆಗಾ ಆಡಿಷನ್‌ನಲ್ಲಿ ಈ ತಂಡದ ಪ್ರದರ್ಶನ ತೀರ್ಪುಗಾರರ ಮೆಚ್ಚುಗೆ ಗಳಿಸಿದೆ.ಡಿ.6ರಂದು ನಡೆದ ಮೆಗಾ ಆಡಿಷನ್‌ನಲ್ಲಿ HIPBOYZ ಡಾನ್ಸ್ ಕ್ರೀವ್‌ನ ನೃತ್ಯಗಾರ್ತಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.ತಂಡದಲ್ಲಿ ಸನ್ಮಿತಾ ಕುಕ್ಕಾವು, ಆಂಜೆಲಿನ್ ಡಿಸೋಜಾ, ದೀಕ್ಷಾ, ಧನ್ವಿ ಭಂಡಾರಿ, ಆಪ್ತ, ಅನ್ವಿತಾ, ರೇಖಾ, ಮನ್ವಿತಾ ಪ್ರಭು, ಧೃತಿ ಮತ್ತು ಸಮನ್ವಿ ಸೇರಿ ಒಟ್ಟು ಹತ್ತು ಪ್ರತಿಭಾವಂತ ನೃತ್ಯಗಾರ್ತಿಯರು ಭಾಗವಹಿಸಿದ್ದರು.

ಅವರ ಆಕರ್ಷಕ ನೃತ್ಯವು ಎಲ್ಲರ ಗಮನ ಸೆಳೆಯಿತು.ತಂಡದ ಈ ಯಶಸ್ಸಿಗೆ ಉಜಿರೆಯ ನೃತ್ಯ ಗುರುಗಳಾದ ಸಹನ್ ಎಮ್.ಎಸ್. ಉಜಿರೆ ಅವರು ಕಾರಣಕರ್ತರಾಗಿದ್ದಾರೆ. ಅವರ ಸೃಜನಾತ್ಮಕ ನೃತ್ಯ ಸಂಯೋಜನೆ ಮತ್ತು ಮಾರ್ಗದರ್ಶನದಲ್ಲಿ ಈ ತಂಡವು ರಿಯಾಲಿಟಿ ಶೋನ ಎರಡನೇ ಹಂತಕ್ಕೆ ಆಯ್ಕೆಯಾಗಿದೆ. ಕರ್ನಾಟಕದ ಪ್ರತಿಷ್ಠಿತ ವೇದಿಕೆಯಲ್ಲಿ ಉಜಿರೆಯ ಪ್ರತಿಭೆಗಳು ಪ್ರಕಾಶಿಸಲು ಸಹನ್ ಅವರ ಪರಿಶ್ರಮ ಬೆನ್ನೆಲುಬಾಗಿದೆ.

Related posts

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya
error: Content is protected !!