24.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯನಿಗೆ ಜೀವ ಬೆದರಿಕೆಯಿದ್ದು ಆತನಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಆತನಿಗೆ ವಿಧಿಸಿರುವ ಹತ್ತನೆಯ ನಿಬಂಧನೆಯನ್ನು ಸಡಿಲಗೊಳಿಸಬೇಕು ಎಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಚಿನ್ನಯ್ಯನ ಪರ ವಕೀಲರು ಡಿ.6 ರಂದು ಅಪೀಲು ಸಲ್ಲಿಸಿದ್ದಾರೆ.

ಸಾಕ್ಷಿ ಸಂರಕ್ಷಣಾ ಕಾಯ್ದೆಯಲ್ಲಿ ರಕ್ಷಣೆ ಪಡೆದಿದ್ದ ಚಿನ್ನಯ್ಯ ಆರೋಪಿಯಾದ ಬಳಿಕ ಈ ರಕ್ಷಣೆಯನ್ನು ಕಳೆದುಕೊಂಡಿದ್ದ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಸಕ್ಷಮ ಪ್ರಾಧಿಕಾರದ ಮುಂದೆಯೂ ನ್ಯಾಯವಾದಿಗಳು ಚಿನ್ನಯ್ಯನಿಗೆ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಿದ್ದು ಇದರ ಆಧಾರದ ಮೇಲೆ ಬೆಳ್ತಂಗಡಿ ನ್ಯಾಯಾಲಯದಲ್ಲಿಯೂ ಆತನಿಗೆ ಜೀವ ಭಯವಿದ್ದು ಸೂಕ್ತ ರಕ್ಷಣೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.ಅದೇ ರೀತಿ ಬುರುಡೆ ಚಿನ್ನಯ್ಯ ಜಾಮೀನಿನ ಮೇಲೆ ಹೊರ ಬಂದರೆ ಆತ ಸ್ಥಳಿಯ ಠಾಣೆಗೆ ಬಂದು ಸಹಿ ಹಾಕುವಂತೆ ನಿಬಂಧನೆ ವಿಧಿಸಲಾಗಿದ್ದು ಈ ನಿಬಂಧನೆಯನ್ನು ಸಡಿಲಿಸುವಂತೆ ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಲಾಗಿದೆ.

ಆರೋಪಿ ಚಿನ್ನಯ್ಯ ಜಾಮೀನು ಲಭಿಸಿದರೆ ಆತನ ಊರಾದ ಮಂಡ್ಯದಲ್ಲಿ ವಾಸಿಸಲು ನಿರ್ಧರಿಸಿದ್ದಾನೆ. ಈ ಹಿನ್ನಲೆಯಲ್ಲಿ ಠಾಣೆಗೆ ಹಾಜರಾತಿಗೆ ವಿನಾಯತಿ ನೀಡುವಂತೆಯೂ ವಿನಂತಿಸಲಾಗಿದೆ.ಆರೋಪಿ ಚಿನ್ನಯ್ಯ ರಕ್ಷಣೆ ಕೋರಿರುವ ಬಗ್ಗೆ ರಕ್ಷಣೆ ನೀಡುವ ಬಗ್ಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಿಂದ ಹಾಗೂ ಇತರ ವಿಚಾರಗಳ ಬಗ್ಗೆ ಎಸ್.ಐ.ಟಿ ಅಧಿಕಾರಿಗಳಿಂದ ನ್ಯಾಯಾಲಯ ವರದಿಯನ್ನು ಕೋರಿದೆ. ಸೆಕ್ಷನ್‌ 215 ರ ಕುರಿತಾದ ವರದಿಯ ಬಗ್ಗೆ ವಾದ ಮಂಡಿಸಲು ವಕೀಲರು ಸಮಯಾವಕಾಶ ಕೋರಿದ್ದು ಒಟ್ಟು ಪ್ರಕರಣದ ವಿಚಾರಣೆಯನ್ನು ಡಿ. 9 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!