25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯನಿಗೆ ಜೀವ ಬೆದರಿಕೆಯಿದ್ದು ಆತನಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಆತನಿಗೆ ವಿಧಿಸಿರುವ ಹತ್ತನೆಯ ನಿಬಂಧನೆಯನ್ನು ಸಡಿಲಗೊಳಿಸಬೇಕು ಎಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಚಿನ್ನಯ್ಯನ ಪರ ವಕೀಲರು ಡಿ.6 ರಂದು ಅಪೀಲು ಸಲ್ಲಿಸಿದ್ದಾರೆ.

ಸಾಕ್ಷಿ ಸಂರಕ್ಷಣಾ ಕಾಯ್ದೆಯಲ್ಲಿ ರಕ್ಷಣೆ ಪಡೆದಿದ್ದ ಚಿನ್ನಯ್ಯ ಆರೋಪಿಯಾದ ಬಳಿಕ ಈ ರಕ್ಷಣೆಯನ್ನು ಕಳೆದುಕೊಂಡಿದ್ದ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಸಕ್ಷಮ ಪ್ರಾಧಿಕಾರದ ಮುಂದೆಯೂ ನ್ಯಾಯವಾದಿಗಳು ಚಿನ್ನಯ್ಯನಿಗೆ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಿದ್ದು ಇದರ ಆಧಾರದ ಮೇಲೆ ಬೆಳ್ತಂಗಡಿ ನ್ಯಾಯಾಲಯದಲ್ಲಿಯೂ ಆತನಿಗೆ ಜೀವ ಭಯವಿದ್ದು ಸೂಕ್ತ ರಕ್ಷಣೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.ಅದೇ ರೀತಿ ಬುರುಡೆ ಚಿನ್ನಯ್ಯ ಜಾಮೀನಿನ ಮೇಲೆ ಹೊರ ಬಂದರೆ ಆತ ಸ್ಥಳಿಯ ಠಾಣೆಗೆ ಬಂದು ಸಹಿ ಹಾಕುವಂತೆ ನಿಬಂಧನೆ ವಿಧಿಸಲಾಗಿದ್ದು ಈ ನಿಬಂಧನೆಯನ್ನು ಸಡಿಲಿಸುವಂತೆ ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಲಾಗಿದೆ.

ಆರೋಪಿ ಚಿನ್ನಯ್ಯ ಜಾಮೀನು ಲಭಿಸಿದರೆ ಆತನ ಊರಾದ ಮಂಡ್ಯದಲ್ಲಿ ವಾಸಿಸಲು ನಿರ್ಧರಿಸಿದ್ದಾನೆ. ಈ ಹಿನ್ನಲೆಯಲ್ಲಿ ಠಾಣೆಗೆ ಹಾಜರಾತಿಗೆ ವಿನಾಯತಿ ನೀಡುವಂತೆಯೂ ವಿನಂತಿಸಲಾಗಿದೆ.ಆರೋಪಿ ಚಿನ್ನಯ್ಯ ರಕ್ಷಣೆ ಕೋರಿರುವ ಬಗ್ಗೆ ರಕ್ಷಣೆ ನೀಡುವ ಬಗ್ಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಿಂದ ಹಾಗೂ ಇತರ ವಿಚಾರಗಳ ಬಗ್ಗೆ ಎಸ್.ಐ.ಟಿ ಅಧಿಕಾರಿಗಳಿಂದ ನ್ಯಾಯಾಲಯ ವರದಿಯನ್ನು ಕೋರಿದೆ. ಸೆಕ್ಷನ್‌ 215 ರ ಕುರಿತಾದ ವರದಿಯ ಬಗ್ಗೆ ವಾದ ಮಂಡಿಸಲು ವಕೀಲರು ಸಮಯಾವಕಾಶ ಕೋರಿದ್ದು ಒಟ್ಟು ಪ್ರಕರಣದ ವಿಚಾರಣೆಯನ್ನು ಡಿ. 9 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya
error: Content is protected !!