July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯನಿಗೆ ಜೀವ ಬೆದರಿಕೆಯಿದ್ದು ಆತನಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಆತನಿಗೆ ವಿಧಿಸಿರುವ ಹತ್ತನೆಯ ನಿಬಂಧನೆಯನ್ನು ಸಡಿಲಗೊಳಿಸಬೇಕು ಎಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಚಿನ್ನಯ್ಯನ ಪರ ವಕೀಲರು ಡಿ.6 ರಂದು ಅಪೀಲು ಸಲ್ಲಿಸಿದ್ದಾರೆ.

ಸಾಕ್ಷಿ ಸಂರಕ್ಷಣಾ ಕಾಯ್ದೆಯಲ್ಲಿ ರಕ್ಷಣೆ ಪಡೆದಿದ್ದ ಚಿನ್ನಯ್ಯ ಆರೋಪಿಯಾದ ಬಳಿಕ ಈ ರಕ್ಷಣೆಯನ್ನು ಕಳೆದುಕೊಂಡಿದ್ದ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಸಕ್ಷಮ ಪ್ರಾಧಿಕಾರದ ಮುಂದೆಯೂ ನ್ಯಾಯವಾದಿಗಳು ಚಿನ್ನಯ್ಯನಿಗೆ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಿದ್ದು ಇದರ ಆಧಾರದ ಮೇಲೆ ಬೆಳ್ತಂಗಡಿ ನ್ಯಾಯಾಲಯದಲ್ಲಿಯೂ ಆತನಿಗೆ ಜೀವ ಭಯವಿದ್ದು ಸೂಕ್ತ ರಕ್ಷಣೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.ಅದೇ ರೀತಿ ಬುರುಡೆ ಚಿನ್ನಯ್ಯ ಜಾಮೀನಿನ ಮೇಲೆ ಹೊರ ಬಂದರೆ ಆತ ಸ್ಥಳಿಯ ಠಾಣೆಗೆ ಬಂದು ಸಹಿ ಹಾಕುವಂತೆ ನಿಬಂಧನೆ ವಿಧಿಸಲಾಗಿದ್ದು ಈ ನಿಬಂಧನೆಯನ್ನು ಸಡಿಲಿಸುವಂತೆ ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಲಾಗಿದೆ.

ಆರೋಪಿ ಚಿನ್ನಯ್ಯ ಜಾಮೀನು ಲಭಿಸಿದರೆ ಆತನ ಊರಾದ ಮಂಡ್ಯದಲ್ಲಿ ವಾಸಿಸಲು ನಿರ್ಧರಿಸಿದ್ದಾನೆ. ಈ ಹಿನ್ನಲೆಯಲ್ಲಿ ಠಾಣೆಗೆ ಹಾಜರಾತಿಗೆ ವಿನಾಯತಿ ನೀಡುವಂತೆಯೂ ವಿನಂತಿಸಲಾಗಿದೆ.ಆರೋಪಿ ಚಿನ್ನಯ್ಯ ರಕ್ಷಣೆ ಕೋರಿರುವ ಬಗ್ಗೆ ರಕ್ಷಣೆ ನೀಡುವ ಬಗ್ಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಿಂದ ಹಾಗೂ ಇತರ ವಿಚಾರಗಳ ಬಗ್ಗೆ ಎಸ್.ಐ.ಟಿ ಅಧಿಕಾರಿಗಳಿಂದ ನ್ಯಾಯಾಲಯ ವರದಿಯನ್ನು ಕೋರಿದೆ. ಸೆಕ್ಷನ್‌ 215 ರ ಕುರಿತಾದ ವರದಿಯ ಬಗ್ಗೆ ವಾದ ಮಂಡಿಸಲು ವಕೀಲರು ಸಮಯಾವಕಾಶ ಕೋರಿದ್ದು ಒಟ್ಟು ಪ್ರಕರಣದ ವಿಚಾರಣೆಯನ್ನು ಡಿ. 9 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಮುಂಡೂರು ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕುಣಿತ ಭಜನೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಬಹುಮುಖ ಪ್ರತಿಭೆ ವಿದುಷಿ ಸಹನಾ ಎಂ. ಶೆಟ್ಟಿ ಭರತನಾಟ್ಯ ರಂಗಪ್ರವೇಶ

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!