26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಕರುನಾಡು Got ಟ್ಯಾಲೆಂಟ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಉಜಿರೆಯ ಹಿಪ್-ಬಾಯ್ಸ್ ನೃತ್ಯ ತಂಡ

ಉಜಿರೆ: ಕರ್ನಾಟಕದ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುತ್ತಿರುವ, ಎನ್.ಪಿ ಪ್ರೊಡಕ್ಷನ್ ನಲ್ಲಿ ಸ್ಪಂದನ ಟಿ.ವಿ. ಪ್ರಸ್ತುತಪಡಿಸುವ ರಾಜ್ಯದ ಅತೀ ದೊಡ್ಡ ಮಲ್ಟಿ ಟ್ಯಾಲೆಂಟ್ ರಿಯಾಲಿಟಿ ಶೋ ಕರುನಾಡು Got ಟ್ಯಾಲೆಂಟ್ ನ ಸೀಸನ್ 2 ಕ್ಕೆ ಉಜಿರೆಯ ಹಿಪ್-ಬಾಯ್ಸ್ ಡಾನ್ಸ್ ಕ್ರೀವ್ ತಂಡವು ಆಯ್ಕೆಯಾಗುವ ಮೂಲಕ ಸ್ಥಳೀಯ ಹೆಗ್ಗಳಿಕೆಯನ್ನು ಹೆಚ್ಚಿಸಿದೆ.

ಇತ್ತೀಚೆಗೆ ನಡೆದ ಮೆಗಾ ಆಡಿಷನ್‌ನಲ್ಲಿ ಈ ತಂಡದ ಪ್ರದರ್ಶನ ತೀರ್ಪುಗಾರರ ಮೆಚ್ಚುಗೆ ಗಳಿಸಿದೆ.ಡಿ.6ರಂದು ನಡೆದ ಮೆಗಾ ಆಡಿಷನ್‌ನಲ್ಲಿ HIPBOYZ ಡಾನ್ಸ್ ಕ್ರೀವ್‌ನ ನೃತ್ಯಗಾರ್ತಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.ತಂಡದಲ್ಲಿ ಸನ್ಮಿತಾ ಕುಕ್ಕಾವು, ಆಂಜೆಲಿನ್ ಡಿಸೋಜಾ, ದೀಕ್ಷಾ, ಧನ್ವಿ ಭಂಡಾರಿ, ಆಪ್ತ, ಅನ್ವಿತಾ, ರೇಖಾ, ಮನ್ವಿತಾ ಪ್ರಭು, ಧೃತಿ ಮತ್ತು ಸಮನ್ವಿ ಸೇರಿ ಒಟ್ಟು ಹತ್ತು ಪ್ರತಿಭಾವಂತ ನೃತ್ಯಗಾರ್ತಿಯರು ಭಾಗವಹಿಸಿದ್ದರು.

ಅವರ ಆಕರ್ಷಕ ನೃತ್ಯವು ಎಲ್ಲರ ಗಮನ ಸೆಳೆಯಿತು.ತಂಡದ ಈ ಯಶಸ್ಸಿಗೆ ಉಜಿರೆಯ ನೃತ್ಯ ಗುರುಗಳಾದ ಸಹನ್ ಎಮ್.ಎಸ್. ಉಜಿರೆ ಅವರು ಕಾರಣಕರ್ತರಾಗಿದ್ದಾರೆ. ಅವರ ಸೃಜನಾತ್ಮಕ ನೃತ್ಯ ಸಂಯೋಜನೆ ಮತ್ತು ಮಾರ್ಗದರ್ಶನದಲ್ಲಿ ಈ ತಂಡವು ರಿಯಾಲಿಟಿ ಶೋನ ಎರಡನೇ ಹಂತಕ್ಕೆ ಆಯ್ಕೆಯಾಗಿದೆ. ಕರ್ನಾಟಕದ ಪ್ರತಿಷ್ಠಿತ ವೇದಿಕೆಯಲ್ಲಿ ಉಜಿರೆಯ ಪ್ರತಿಭೆಗಳು ಪ್ರಕಾಶಿಸಲು ಸಹನ್ ಅವರ ಪರಿಶ್ರಮ ಬೆನ್ನೆಲುಬಾಗಿದೆ.

Related posts

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya
error: Content is protected !!