24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

ಉರುವಾಲು : ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿ ಇದರ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆಯನ್ನು ಡಿ.7ರಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಹಾರಾಜರು, ಮೈಸೂರು ಸಂಸ್ಥಾನ ನೇರವೇರಿಸಿದರು. ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ದಿವ್ಯ ಉಪಸ್ಥಿತರಿದ್ದರು.

ಡಾ. ಪ್ರಭಾಕರ್ ಭಟ್, ಕಲ್ಲಡ್ಕ, ಸಂಚಾಲಕರು, ವಿವೇಕಾನಂದ ವಿದ್ಯಾಸಂಸ್ಥೆಗಳು ಧಾರ್ಮಿಕ ಭಾಷಣ ಮಾಡಿದರು. ಸಭಾಧ್ಯಕ್ಷತೆಯನ್ನು ಶಶಿಧರ ಶೆಟ್ಟಿ, ಬರೋಡಾ ಅಧ್ಯಕ್ಷರು, ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣಾ ಸಮಿತಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರಮೋದ್ ಮಧ್ವರಾಜ್, ಮಾಜಿ ಸಚಿವರು, ಕರ್ನಾಟಕ ಸರಕಾರ, ಕೆ. ಮೋಹನ್ ಕುಮಾರ್, ಲಕ್ಷ್ಮೀ ಇಂಡಸ್ಟ್ರೀಸ್, ಕನಸಿನಮನೆ, ಉದ್ಯಮಿಗಳು, ಉಜಿರೆ ಅಶೋಕ್ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಧರ್ಮಸ್ಥಳ ಡಾ|| ಶ್ರೀಕೃಷ್ಣರಾಜ್, ಯು.ಎಸ್.ಎ. ರಾಜಮಂದಿರ, ಉರುವಾಲು,ರವೀಂದ್ರ ಶೆಟ್ಟಿ ಬಜಗೋಳಿ, ರಾಜ್ಯಾಧ್ಯಕ್ಷರು ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ & ಸ್ಟೋನ್‌ಕ್ರಷರ್ ಓನರ್ಸ್ ಅಸೋಸಿಯೇಶನ್ , ಭರತ್ ಶೆಟ್ಟಿ ಕೇರಿ, ಅಧ್ಯಕ್ಷರು, ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ತಣ್ಣೀರುವಂತ, ರಾಜೇಶ್ ಶೆಟ್ಟಿ, ಮಾಲಕರು, ಶಂಕರಿ ಇಲೆಕ್ಟಿಕಲ್ಸ್ ಬೆಂಗಳೂರು, ನಾಗಾರ್ಜುನ್ ರಾವ್, ಉದ್ಯಮಿಗಳು, ಬೆಂಗಳೂರು, ನಟೇಶ್ ಪಾಹಜಾರಿ, ಉದ್ಯಮಿಗಳು, ಬೆಂಗಳೂರು, ಕೆ. ಸಿ. ವಿಜಯ ಕುಮಾರ್, ಉದ್ಯಮಿಗಳು, ಬೆಂಗಳೂರು, ವಿಶ್ವನಾಥ್, ಉದ್ಯಮಿಗಳು, ಬೆಂಗಳೂರು ಪವನ್ ಆಚಾರ್ಯ, ಕ್ಷೇತ್ರ ಪುರೋಹಿತರು, ಗಯಾ ಕ್ಷೇತ್ರ, ಬಿರ್ಲಾ, ಶ್ರೀಮತಿ ಸುಶೀಲ, ಟ್ರಸ್ಟಿ, ಸಿ.ಎಸ್.ಆರ್. ಟ್ರಸ್ಟ್, ಬೆಂಗಳೂರು, ಶ್ರೀಮತಿ ಅರ್ಚನಾ ರಾಜೇಶ್ ಪೈ, ಸಿ.ಇ.ಒ. ಸಂಧ್ಯಾ ಪ್ರೆಶ್ ಉಜಿರೆ,ಶ್ರೀಮತಿ ರೇವತಿ, ಟ್ರಸ್ಟಿ ಶ್ರೀಧಾಮ, ಮಾಣಿಲ, ಉದ್ಯಮಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಕಾಯಾ೯ಧ್ಯಕ್ಷ ಕಿರಣ್ ಚಂದ್ರ ಪುಷ್ಪಗಿರಿ, ಅತುಲ್ ಕುಮಾರ್ ಕೆ.ಎನ್ ಹಲೇಜಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಸಂಚಾಲಕ ಯೋಗೀಶ್ ಪೂಜಾರಿ ಕಡ್ತಿಲ ಸ್ವಾಗತಿಸಿದರು. ಉಪನ್ಯಾಸಕರಾದ ಕೇಶವ ಬಂಗೇರ ಕಾಯ೯ಕ್ರಮ ನಿರೂಪಿಸಿದರು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಮೋಹನ್ ಕುಮಾರ್ ಉಜಿರೆ, ಕಿರಣ್ ಚಂದ್ರ ಪುಷ್ಪಗಿರಿ, ಅತುಲ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya
error: Content is protected !!