September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯನಿಗೆ ಜೀವ ಬೆದರಿಕೆಯಿದ್ದು ಆತನಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಆತನಿಗೆ ವಿಧಿಸಿರುವ ಹತ್ತನೆಯ ನಿಬಂಧನೆಯನ್ನು ಸಡಿಲಗೊಳಿಸಬೇಕು ಎಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಚಿನ್ನಯ್ಯನ ಪರ ವಕೀಲರು ಡಿ.6 ರಂದು ಅಪೀಲು ಸಲ್ಲಿಸಿದ್ದಾರೆ.

ಸಾಕ್ಷಿ ಸಂರಕ್ಷಣಾ ಕಾಯ್ದೆಯಲ್ಲಿ ರಕ್ಷಣೆ ಪಡೆದಿದ್ದ ಚಿನ್ನಯ್ಯ ಆರೋಪಿಯಾದ ಬಳಿಕ ಈ ರಕ್ಷಣೆಯನ್ನು ಕಳೆದುಕೊಂಡಿದ್ದ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಸಕ್ಷಮ ಪ್ರಾಧಿಕಾರದ ಮುಂದೆಯೂ ನ್ಯಾಯವಾದಿಗಳು ಚಿನ್ನಯ್ಯನಿಗೆ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಿದ್ದು ಇದರ ಆಧಾರದ ಮೇಲೆ ಬೆಳ್ತಂಗಡಿ ನ್ಯಾಯಾಲಯದಲ್ಲಿಯೂ ಆತನಿಗೆ ಜೀವ ಭಯವಿದ್ದು ಸೂಕ್ತ ರಕ್ಷಣೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.ಅದೇ ರೀತಿ ಬುರುಡೆ ಚಿನ್ನಯ್ಯ ಜಾಮೀನಿನ ಮೇಲೆ ಹೊರ ಬಂದರೆ ಆತ ಸ್ಥಳಿಯ ಠಾಣೆಗೆ ಬಂದು ಸಹಿ ಹಾಕುವಂತೆ ನಿಬಂಧನೆ ವಿಧಿಸಲಾಗಿದ್ದು ಈ ನಿಬಂಧನೆಯನ್ನು ಸಡಿಲಿಸುವಂತೆ ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಲಾಗಿದೆ.

ಆರೋಪಿ ಚಿನ್ನಯ್ಯ ಜಾಮೀನು ಲಭಿಸಿದರೆ ಆತನ ಊರಾದ ಮಂಡ್ಯದಲ್ಲಿ ವಾಸಿಸಲು ನಿರ್ಧರಿಸಿದ್ದಾನೆ. ಈ ಹಿನ್ನಲೆಯಲ್ಲಿ ಠಾಣೆಗೆ ಹಾಜರಾತಿಗೆ ವಿನಾಯತಿ ನೀಡುವಂತೆಯೂ ವಿನಂತಿಸಲಾಗಿದೆ.ಆರೋಪಿ ಚಿನ್ನಯ್ಯ ರಕ್ಷಣೆ ಕೋರಿರುವ ಬಗ್ಗೆ ರಕ್ಷಣೆ ನೀಡುವ ಬಗ್ಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಿಂದ ಹಾಗೂ ಇತರ ವಿಚಾರಗಳ ಬಗ್ಗೆ ಎಸ್.ಐ.ಟಿ ಅಧಿಕಾರಿಗಳಿಂದ ನ್ಯಾಯಾಲಯ ವರದಿಯನ್ನು ಕೋರಿದೆ. ಸೆಕ್ಷನ್‌ 215 ರ ಕುರಿತಾದ ವರದಿಯ ಬಗ್ಗೆ ವಾದ ಮಂಡಿಸಲು ವಕೀಲರು ಸಮಯಾವಕಾಶ ಕೋರಿದ್ದು ಒಟ್ಟು ಪ್ರಕರಣದ ವಿಚಾರಣೆಯನ್ನು ಡಿ. 9 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಕಾರ್ಯದರ್ಶಿಯಾಗಿ ಅರುಣ ದೇವಾಡಿಗ ಆಯ್ಕೆ

Suddi Udaya

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya
error: Content is protected !!