23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

ವೇಣೂರು: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಇಲ್ಲಿನ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾಳೆ.

ಇತ್ತೀಚೆಗಷ್ಟೇ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಇದರ ಆಶ್ರಯದಲ್ಲಿ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಜರಗಿದ ರಾಜ್ಯಮಟ್ಟದ ರಾಜ್ಯ ಸ್ಪರ್ಧೆ ಭಾಷಣ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ನಾಲ್ಕು ವಿಭಾಗಗಳಿಂದ ಸ್ಪರ್ಧಿಸಿದ 106 ವಿದ್ಯಾರ್ಥಿಗಳಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಳು. ಇವರು ಪಿಲ್ಯದ ಶೈಲಜಾ ಮತ್ತು ಸತೀಶ್ ಬಂಗೇರ ದಂಪತಿಗಳ ಪುತ್ರಿಯಾಗಿದ್ದು, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪಿಲ್ಯದ ಹಳೆ ವಿದ್ಯಾರ್ಥಿನಿಯಾಗಿದ್ದಾಳೆ.

Related posts

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya
error: Content is protected !!