25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

ವೇಣೂರು: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಇಲ್ಲಿನ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾಳೆ.

ಇತ್ತೀಚೆಗಷ್ಟೇ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಇದರ ಆಶ್ರಯದಲ್ಲಿ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಜರಗಿದ ರಾಜ್ಯಮಟ್ಟದ ರಾಜ್ಯ ಸ್ಪರ್ಧೆ ಭಾಷಣ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ನಾಲ್ಕು ವಿಭಾಗಗಳಿಂದ ಸ್ಪರ್ಧಿಸಿದ 106 ವಿದ್ಯಾರ್ಥಿಗಳಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಳು. ಇವರು ಪಿಲ್ಯದ ಶೈಲಜಾ ಮತ್ತು ಸತೀಶ್ ಬಂಗೇರ ದಂಪತಿಗಳ ಪುತ್ರಿಯಾಗಿದ್ದು, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪಿಲ್ಯದ ಹಳೆ ವಿದ್ಯಾರ್ಥಿನಿಯಾಗಿದ್ದಾಳೆ.

Related posts

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya
error: Content is protected !!