ಬೆಳ್ತಂಗಡಿ: ಗುರುವಾಯನಕೆರೆ ಪೇಟೆಯಲ್ಲಿ ಸ್ಕೂಟಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ರಾತ್ರಿ ನಡೆದಿದೆ.

ಡಿಕ್ಕಿ ರಭಸಕ್ಕೆ ಸ್ಕೂಟಿ ನುಚ್ಚು ನೂರಾಗಿದೆ. ಬೈಕಿನ ಎದುರಿನ ಭಾಗ ಪುಡಿ ಪುಡಿಯಾಗಿದೆ. ಬೈಕ್ ಮತ್ತು ಸ್ಕೂಟಿ ಸವಾರಿಬ್ಬರಿಗೆ ಗಂಭೀರ ಪ್ರಮಾಣದ ಗಾಯವಾಗಿದೆ ಎಂದು ತಿಳಿದು ಬಂದಿದೆ.











