March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

ಗುರುವಾಯನಕೆರೆ: ಕುವೆಟ್ಟು ಗ್ರಾಮ ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವವು ಡಿ.13 ರಂದು ಸಂಜೆ 6ರಿಂದ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಶಿವಾಜಿರಾವ್ ಗದ್ದೆಮನೆ ಅವರು ತಿಳಿಸಿದ್ದಾರೆ.


ಅಂದು ಸಂಜೆ 5ಕ್ಕೆ ಪಾಡ್ಯಾರುಬೀಡು ಮನೆಯಿಂದ ಭವ್ಯವಾದ ಮೆರವಣಿಗೆಯಲ್ಲಿ ದೈವದ ಭಂಡಾರವನ್ನು ಪಿಲಿಚಾಮುಂಡಿ ಕಲ್ಲಿಗೆ ತರಲಾಗುವುದು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7 ಗಂಟೆಯ ಬಳಿಕ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದಬಲಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ.

ಸಮಿತಿಯ ಗೌರವಾಧ್ಯಕ್ಷರಾಗಿ ಪ್ರವೀಣ್ ಕುಮಾರ್ ಅಜ್ರಿ ಅನುವಂಶೀಯ ಆಡಳಿತದಾರರು ಪಾಡ್ಯಾರುಬೀಡು, ಶ್ರೀನಿವಾಸ ಅಸ್ರಣ್ಣರು ಮೂಡುಮನೆ, ಎ. ರಾಜಶೇಖರ ಶೆಟ್ಟಿ ಚಾವಡಿ ನಾಯಕರು ಅಳದಂಗಡಿ ಅರಮನೆ, ವಿತೇಶ್ ಬಂಗೇರ ಪ್ರಧಾನ ಕಾರ್ಯದರ್ಶಿ, ದೀಕ್ಷಿತ್ ವರಕಬೆ ಕಾರ್ಯದರ್ಶಿ, ನಾರಾಯಣ ಆಚಾರ್ಯ ಬರಾಯ ಕೋಶಾಧಿಕಾರಿ ಹಾಗೂ ಸರ್ವ ಸದಸ್ಯರು ದೊಂಪದಬಲಿ ಉತ್ಸವ ಸಮಿತಿ ಮತ್ತು ಊರಿನ ನಾಗರಿಕರು ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ. ಅನ್ನಸಂತರ್ಪಣೆ ಇರುವುದರಿಂದ ಭಕ್ತರು ಅಕ್ಕಿ, ತೆಂಗಿನಕಾಯಿ, ತರಕಾರಿಗಳನ್ನು ನೀಡಬಹುದು. ಪ್ರತಿಮನೆಯವರು ಕನಿಷ್ಠ2 ತೆಂಗಿನಕಾಯಿ, 2 ಎಳನೀರು, 1ಸೇರು ಅಕ್ಕಿ, ಎಳ್ಳೆಣ್ಣೆ ಹಾಗೂ ಹೆಚ್ಚಿನ ಧನ ಸಹಾಯವನ್ನು ನೀಡಿ, ಸಹಕರಿಸುವಂತೆ ವಿನಂತಿಸಲಾಗಿದೆ.

Related posts

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya
error: Content is protected !!