September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

ಗುರುವಾಯನಕೆರೆ: ಕುವೆಟ್ಟು ಗ್ರಾಮ ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವವು ಡಿ.13 ರಂದು ಸಂಜೆ 6ರಿಂದ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಶಿವಾಜಿರಾವ್ ಗದ್ದೆಮನೆ ಅವರು ತಿಳಿಸಿದ್ದಾರೆ.


ಅಂದು ಸಂಜೆ 5ಕ್ಕೆ ಪಾಡ್ಯಾರುಬೀಡು ಮನೆಯಿಂದ ಭವ್ಯವಾದ ಮೆರವಣಿಗೆಯಲ್ಲಿ ದೈವದ ಭಂಡಾರವನ್ನು ಪಿಲಿಚಾಮುಂಡಿ ಕಲ್ಲಿಗೆ ತರಲಾಗುವುದು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7 ಗಂಟೆಯ ಬಳಿಕ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದಬಲಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ.

ಸಮಿತಿಯ ಗೌರವಾಧ್ಯಕ್ಷರಾಗಿ ಪ್ರವೀಣ್ ಕುಮಾರ್ ಅಜ್ರಿ ಅನುವಂಶೀಯ ಆಡಳಿತದಾರರು ಪಾಡ್ಯಾರುಬೀಡು, ಶ್ರೀನಿವಾಸ ಅಸ್ರಣ್ಣರು ಮೂಡುಮನೆ, ಎ. ರಾಜಶೇಖರ ಶೆಟ್ಟಿ ಚಾವಡಿ ನಾಯಕರು ಅಳದಂಗಡಿ ಅರಮನೆ, ವಿತೇಶ್ ಬಂಗೇರ ಪ್ರಧಾನ ಕಾರ್ಯದರ್ಶಿ, ದೀಕ್ಷಿತ್ ವರಕಬೆ ಕಾರ್ಯದರ್ಶಿ, ನಾರಾಯಣ ಆಚಾರ್ಯ ಬರಾಯ ಕೋಶಾಧಿಕಾರಿ ಹಾಗೂ ಸರ್ವ ಸದಸ್ಯರು ದೊಂಪದಬಲಿ ಉತ್ಸವ ಸಮಿತಿ ಮತ್ತು ಊರಿನ ನಾಗರಿಕರು ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ. ಅನ್ನಸಂತರ್ಪಣೆ ಇರುವುದರಿಂದ ಭಕ್ತರು ಅಕ್ಕಿ, ತೆಂಗಿನಕಾಯಿ, ತರಕಾರಿಗಳನ್ನು ನೀಡಬಹುದು. ಪ್ರತಿಮನೆಯವರು ಕನಿಷ್ಠ2 ತೆಂಗಿನಕಾಯಿ, 2 ಎಳನೀರು, 1ಸೇರು ಅಕ್ಕಿ, ಎಳ್ಳೆಣ್ಣೆ ಹಾಗೂ ಹೆಚ್ಚಿನ ಧನ ಸಹಾಯವನ್ನು ನೀಡಿ, ಸಹಕರಿಸುವಂತೆ ವಿನಂತಿಸಲಾಗಿದೆ.

Related posts

ಬೆಳ್ತಂಗಡಿ: ಡಾ. ಬಿ.ಆರ್‌. ಅಂಬೇಡ್ಕರ್‌ ಹುಟ್ಟುಹಬ್ಬ ಕಾರ್ಯಕ್ರಮ

Suddi Udaya

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!