30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

ಬೆಳ್ತಂಗಡಿ : ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ. 08 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗೌರವಾರ್ಪಣೆ ಸಲ್ಲಿಸಿದರು.

ದಿ. ಲಕ್ಷ್ಮಣ ಗೌಡ ಮತ್ತು ಕುಸುಮ ದಂಪತಿಯ ಪುತ್ರನಾದ ಅಶೋಕ್ ಪಿ ಲ್ ಇವರು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ದರ್ಜೆ ಯಲ್ಲಿ ತೇರ್ಗಡೆ ಪಡೆದು, ಉತ್ತಮ ವಾಲಿಬಾಲ್ ಕ್ರೀಡಾಕೂಟವಾಗಿದ್ದು, ಇವರು 2003 ರಲ್ಲಿ ಭಾರತ ದೇಶದ ರಕ್ಷಣಾ ವಿಭಾಗದ ಏರ್ಪೋರ್ಸ್ ನಲ್ಲಿ ಆಯ್ಕೆಯಾಗಿ 2004 ರಲ್ಲಿ ಮಹಾರಾಷ್ಟ್ರ ದ ನಾಸಿಕ್ ನಲ್ಲಿ ತರಬೇತಿ ಪಡೆದು ದೇಶದ ವಿವಿಧ ರಾಜ್ಯಗಳಾದ ಲೇ ಲಡಾಕ್, ಜಮ್ಮು ಕಾಶ್ಮೀರ, ಶಿಲ್ಲೊಂಗ್, ಮೇಘಾಲಯ, ಅಸ್ಸಾಂ, ಪಠಾನ್ ಕೋಟ್, ಕೂಪೂರ, ಬಟಾಮುಲ್ಲಾ, ರಾಂಚಿ ಹೀಗೆ ಹಲವಾರು ದೇಶದ ಭಯಾನಕ ಗಡಿ ಪ್ರದೇಶಗಳಲ್ಲಿ, ಮೈ ಕೊರೆಯುವ 25 ಡಿಗ್ರಿ ತಾಪಮಾನದಲ್ಲೂ ಸುಮಾರು 22 ವರ್ಷ ದೇಶ ಸೇವೆ ಮಾಡಿ ನವೆಂಬರ್ 31 ರಂದು ಸೇವೆಯಿಂದ ನಿವೃತ್ತಿ ಗೊಂಡು ಡಿ 04 ರಂದು ಊರಿಗೆ ಬಂದಿರುತ್ತಾರೆ.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ, ತಾಲೂಕು ಬಿ ಎಂ ಎಸ್ ಅಧ್ಯಕ್ಷರು ವಕೀಲರಾದ ಉದಯ ಕುಮಾರ್ ಬಿ. ಕೆ, ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಪಾಲ್ತಿಮಾರ್, ವಿಮಲ ತಾರಿದಡಿ, ಶಿವಣ್ಣ ಗೌಡ ಹೇವ, ಶಿವಪ್ರಸಾದ್ ಗೌಡ ಸುದೆಪ್ಪಿಲ, ಪ್ರಮುಖರಾದ ಅಶೋಕ ಮೊಗ್ರ, ಕುಶಾಲಪ್ಪ ಗೌಡ, ಗೋಪಾಲ ಗೌಡ, ರಾಜೇಶ್, ಶಿವಪ್ಪ ಗೌಡ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.

Related posts

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!