23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶಿವಗಿರಿಯ ಶಾಖಾ ಮಠಕ್ಕೆ ರಾಜ್ಯದಲ್ಲಿ 5 ಎಕರೆ ಸ್ಥಳ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಿಳಿಸಿದ್ದು, ಮಠ ಬೆಳ್ತಂಗಡಿ ತಾಲೂಕಿನಲ್ಲಿ ನಿರ್ಮಾಣವಾಗಬೇಕು. ತಾಲೂಕಿನ ಪ್ರಮುಖ ವೃತ್ತದಲ್ಲಿ ಕೀರ್ತಿಶೇಷ ಕೆ.ವಸಂತ ಬಂಗೇರರ ಪುತ್ಥಳಿ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ ಬೆಳ್ತಂಗಡಿ ಜೂನಿಯ‌ರ್ ಕಾಲೇಜು ಮೈದಾನದ ದಿ.ಕೆ.ವಸಂತ ಬಂಗೇರ ಸಭಾ ವೇದಿಕೆಯಲ್ಲಿ 12ನೇ ವರ್ಷದ ಕೋಟಿ-ಚೆನ್ನಯ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್ ಮಾತನಾಡಿದರು. ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಅಧ್ಯಕ್ಷತೆ ವಹಿಸಿದ್ದರು.

ಬಿಲ್ಲವ ಮಹಿಳಾ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜಿತಾ ವಿ.ಬಂಗೇರ ಕ್ರೀಡಾಜ್ಯೋತಿ ಹಸ್ತಾಂತರಿಸಿದರು. ಕ್ರೀಡಾ ವಾಹನ ಜಾಥಾಕ್ಕೆ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಚಾಲನೆ ನೀಡಿದರು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಧ್ವಜಾರೋಹಣ ನೆರವೇರಿಸಿದರು.

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ರಾಜಾರಾಮ್ ಕೆ.ಬಿ., ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ, ಗುರುವಾಯನಕೆರೆ ಎನ್.ಇ.ಇ.ಟಿ. ನರ್ಸಿಂಗ್ ಕಾಲೇಜಿನ ಮ್ಯಾನೇಜಿಂಗ್ ಡೈರೆಕ್ಟರ್ ಸಜಿ ಆರ್., ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮಂಡಳಿ ತಾಲೂಕು ಸಂಚಾಲಕ ನಿತ್ಯಾನಂದ ನಾವರ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಬಂಟ್ವಾಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಯೋಗಿಶ್ ಕುಮಾ‌ರ್ ನಡಕ್ಕರ, ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಸಂಘದ ಮಾಜಿ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಕ್ರೀಡಾ ನಿರ್ದೇಶಕ ತನುಷ್ ಜಿ.ಹೆರಾಜೆ, ಯುವ ಬಿಲ್ಲವ ವೇದಿಕೆ ಕ್ರೀಡಾ ಕಾರ್ಯದರ್ಶಿ ದೇವಿಪ್ರಸಾದ್ ಬರಮೇಲು, ಸದಾನಂದ ಪೂಜಾರಿ ಉಂಗಿಲಬೈಲು, ಶಿರ್ಲಾಲು ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್.ಸುವರ್ಣ, ರೂಪೇಶ್ ಕೆ.ಧರ್ಮಸ್ಥಳ ಮತ್ತಿತರರಿದ್ದರು.

ವಿಶ್ವಕಪ್ ವಿಜೇತ ಕಬಡ್ಡಿ ತಂಡದ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ನೇತೃತ್ವದಲ್ಲಿ ಕ್ರೀಡಾಜ್ಯೋತಿ ಕ್ರೀಡಾಂಗಣಕ್ಕೆ ಸಾಗಿ ಬಂತು. ಬಳಿಕ ಧನಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು. ಸಮಾಜದ 6 ಜೋಡಿ ಅವಳಿಗಳನ್ನು ಗೌರವಿಸಲಾಯಿತು. ವಿಜಯ ಹರಿದಾಸ್ ಪ್ರಾರ್ಥಿಸಿದರು. ನಿತೀಶ್ ಎಚ್.ಕುಕ್ಕೇಡಿ ಸ್ವಾಗತಿಸಿದರು.ಸತೀಶ್ ಹೊಸ್ಮಾರ್ ನಿರೂಪಿಸಿದರು. ಪ್ರಸಾದ್ ಎಂ.ಕೆ. ವಂದಿಸಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya
error: Content is protected !!