July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ,ಡಿ,08 : ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ವೀರಾಂಗಣ ಡಿ. ಅನಿತಾ ಸುರೇಂದ್ರ ಕುಮಾರ್ ರವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ. ಸುರೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ಬಜಗೋಳಿಯ ಸುಮ್ಮ ಗುತ್ತು ವಿನಲ್ಲಿ ನಡೆದ ಭಾರತೀಯ ಜೈನ್ ಮಿಲನ್ ವಲಯ 8ರ 9ನೇ ಆವೃತ್ತಿಯ ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆ ತಂಡಗಳಿಗೆ ಹಲವು ಪ್ರಶಸ್ತಿಗಳು ಲಭಿಸಿವೆ.

ಹಿರಿಯರ ವಿಭಾಗದಲ್ಲಿ ಉಜಿರೆಯ ಶುಕ್ಲ ತಂಡವು ಉತ್ತಮ ಪ್ರದರ್ಶನ ನೀಡುವ ಮೂಲಕ ದ್ವಿತೀಯ ಸ್ಥಾನವನ್ನು ಪಡೆದು, ಉಜಿರೆಯ ಶ್ರುತ ತಂಡವು ಐದನೇ ಸ್ಥಾನ ಪಡೆಯಿತು. ಹಾಗೆಯೇ ಕಿರಿಯರ ವಿಭಾಗದಲ್ಲಿ ಉಜಿರೆಯ ಬ್ರಾಹ್ಮರಿ ತಂಡವು ದ್ವಿತೀಯ ಸ್ಥಾನ ಪಡೆದು, ಉಜಿರೆಯ ಹರ್ಷದಾ ತಂಡ ನಾಲ್ಕನೇ ಸ್ಥಾನ ಪಡೆಯಿತು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸುಮಾರು 90 ಕ್ಕೂ ಅಧಿಕ ತಂಡಗಳ ಪೈಕಿ ಅತ್ಯುತ್ತಮವಾಗಿ ಜಿನಭಜನೆಯನ್ನು ಪ್ರಸ್ತುತಪಡಿಸಿದ ಉಜಿರೆಯ ನಾಲ್ಕು ತಂಡಗಳಿಗೆ ಎರಡು ವರ್ಗಗಳಲ್ಲೂ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದೆ. ಈ ಮೂಲಕ ಜನವರಿಯಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆಗೆ 4 ತಂಡಗಳು ಆಯ್ಕೆಗೊಂಡಿದೆ.

ಈ ಹಿಂದೆ ನಡೆದ ಆವೃತ್ತಿಯ ಜಿನಭಜನಾ ಸ್ಪರ್ಧೆಗಳಲ್ಲಿ ಉಜಿರೆಯ ತಂಡವು ಸಕ್ರೀಯವಾಗಿ ಭಾಗವಹಿಸುತ್ತಿದ್ದು, ಹಲವು ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದೆ. ಎರಡು ಬಾರಿ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು.

ವಿಜೇತ ಉಜಿರೆಯ ಜಿನಭಜನಾ ತಂಡಗಳ ಸೋನಿಯಾ ಯಶೋವರ್ಮ ಮಾರ್ಗದರ್ಶವನ್ನು ನೀಡಿ, ಅಭಿನಂದನೆಗಳನ್ನು ತಿಳಿಸಿರುತ್ತಾರೆ. ತಂಡಗಳನ್ನು ಉಜಿರೆಯ ತೃಪ್ತ ಕುಮಾರ್ ಜೈನ್ ಸಂಯೋಜಿಸಿದರು.

Related posts

ಮರೋಡಿ: ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ, ಧಾರ್ಮಿಕ ಸಭೆ-ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯಿಂದ ಬದುಕಿನಲ್ಲಿ ನೆಮ್ಮದಿ: ಸುಮಂತ್ ಕುಮಾರ್ ಜೈನ್-ಇಂದು (ಎ. 1) ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಶ್ರೀ ಮಾಯಂದಾಲೆ ನೇಮೋತ್ಸವ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya
error: Content is protected !!