23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಯನ್ನು  ಇಂದು ಡಿಸೆಂಬರ್ 7 ರಂದು ವೇಣೂರಿನ  ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಅಳದಂಗಡಿಯ ಅರಮನೆ ಚಾವಡಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ  ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಹಾಗೂ ಇರ್ವತ್ತೂರು ಮಾಗಣೆಯ ಪ್ರಮುಖರು ಉಪಸ್ಥಿತರಿದ್ದರು.

ಶ್ರವಣ ಬೆಳಗೊಳ, ಕಾರ್ಕಳ ಹಾಗೂ ವೇಣೂರಿನ ಬಾಹುಬಲಿ ಸ್ವಾಮಿಯ ವಿಗ್ರಹ ಪ್ರತಿಷ್ಠೆಯ ಐತಿಹಾಸಿಕ ಕಥೆಯನ್ನು ಒಳಗೊಂಡ ಈ ಕಾದಂಬರಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ  ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya
error: Content is protected !!