25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಯನ್ನು  ಇಂದು ಡಿಸೆಂಬರ್ 7 ರಂದು ವೇಣೂರಿನ  ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಅಳದಂಗಡಿಯ ಅರಮನೆ ಚಾವಡಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ  ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಹಾಗೂ ಇರ್ವತ್ತೂರು ಮಾಗಣೆಯ ಪ್ರಮುಖರು ಉಪಸ್ಥಿತರಿದ್ದರು.

ಶ್ರವಣ ಬೆಳಗೊಳ, ಕಾರ್ಕಳ ಹಾಗೂ ವೇಣೂರಿನ ಬಾಹುಬಲಿ ಸ್ವಾಮಿಯ ವಿಗ್ರಹ ಪ್ರತಿಷ್ಠೆಯ ಐತಿಹಾಸಿಕ ಕಥೆಯನ್ನು ಒಳಗೊಂಡ ಈ ಕಾದಂಬರಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ  ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya
error: Content is protected !!