22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಯನ್ನು  ಇಂದು ಡಿಸೆಂಬರ್ 7 ರಂದು ವೇಣೂರಿನ  ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಅಳದಂಗಡಿಯ ಅರಮನೆ ಚಾವಡಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ  ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಹಾಗೂ ಇರ್ವತ್ತೂರು ಮಾಗಣೆಯ ಪ್ರಮುಖರು ಉಪಸ್ಥಿತರಿದ್ದರು.

ಶ್ರವಣ ಬೆಳಗೊಳ, ಕಾರ್ಕಳ ಹಾಗೂ ವೇಣೂರಿನ ಬಾಹುಬಲಿ ಸ್ವಾಮಿಯ ವಿಗ್ರಹ ಪ್ರತಿಷ್ಠೆಯ ಐತಿಹಾಸಿಕ ಕಥೆಯನ್ನು ಒಳಗೊಂಡ ಈ ಕಾದಂಬರಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ  ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya
error: Content is protected !!